ADVERTISEMENT

ಎರಡನೇ ದಿನಕ್ಕೆ ಕಾಲಿರಿಸಿದ ಅಂಗನವಾಡಿ ಕಾರ್ಯಕರ್ತೆಯರ ಧರಣಿ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2021, 10:49 IST
Last Updated 17 ಆಗಸ್ಟ್ 2021, 10:49 IST
ಹಾಸನದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರು ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರ ಧರಣಿ ನಡೆಸಿದರು.
ಹಾಸನದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರು ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರ ಧರಣಿ ನಡೆಸಿದರು.   

ಹಾಸನ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರುನಡೆಸುತ್ತಿರುವ ಧರಣಿ ಮಂಗಳವಾರ ಎರಡನೇ ದಿನಕ್ಕೆ ಕಾಲಿರಿಸಿದೆ.

ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯ ಮಾಡಬೇಕು. ಐಸಿಡಿಎಸ್‌ ಕೆಲಸ ಹೊರತು ಪಡಿಸಿ ಉಳಿದ ಕೆಲಸ ನಿರ್ಬಂಧಿಸಬೇಕು. ಕನಿಷ್ಠ ವೇತನ ಜಾರಿ ಮಾಡಬೇಕು. ಅಂಗನವಾಡಿನೌಕರರನ್ನು ಕಾಯಂ ಮಾಡುವ ತನಕ ಕಾರ್ಯಕರ್ತೆಯರಿಗೆ ₹30 ಸಾವಿರ ಮತ್ತು ಸಹಾಯಕರಿಗೆ₹21 ಸಾವಿರ ವೇತನ ನೀಡಬೇಕು ಎಂದು ಆಗ್ರಹಿಸಿದರು.

ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನು ನೀಡಬೇಕು. ಮುಂಬಡ್ತಿ, ವರ್ಗಾವಣೆ, ಪೌಷ್ಟಿಕ ಆಹಾರ ಸರಬರಾಜು ಮಾಡುವ ಎಂಎಸ್‌ಪಿಟಿಸಿ ಗಳಲ್ಲಿ ರಾಜಕೀಯ ಮಧ್ಯ ಪ್ರವೇಶ ತಡೆಯಬೇಕು. ಖಾಲಿಯಿರುವ ಸಹಾಯಕಿಯರು, ಕಾರ್ಯಕರ್ತೆಯರ ಹುದ್ದೆ ಭರ್ತಿ ಮಾಡಬೇಕು. ಬಜೆಟ್‌ನಲ್ಲಿಕಡಿತವಾಗಿರುವ ₹8452.38 ಕೋಟಿ ಹಣ ವಾಪಸ್ ನೀಡಬೇಕು. ಐಸಿಡಿಎಸ್ ಯೋಜನೆಗೆಅನುದಾನ ಹೆಚ್ಚಿಸಿ ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಸೇವಾ ಜೇಷ್ಠತೆಯ ಆಧಾರದಲ್ಲಿ ವೇತನ ನಿಗದಿ ಮಾಡಿ, ಸಹಾಯಕಿಯರು ಮತ್ತುಕಾರ್ಯಕರ್ತೆಯರ ವೇತನದ ಅಂತರ ಕಡಿಮೆ ಮಾಡಬೇಕು. ಮೊಟ್ಟೆಗಳನ್ನು ಕುಕ್ಕುಟೋದ್ಯಮ ಮಹಾ ಮಂಡಳಿಯಿಂದಲೇ ಸರಬರಾಜು ಮಾಡಿ ಮುಂಗಡವಾಗಿ ಹಣ ನೀಡಬೇಕು. ಕೋಳಿ ಮೊಟ್ಟೆ ಖರೀದಿಯಲ್ಲಿ ಆಗಿರುವ ಭ್ರಷ್ಟಾಚಾರದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಧರಣಿಯಲ್ಲಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಇಂದ್ರಮ್ಮ, ಜೆ.ಪಿ.ಶೈಲಜಾ, ಜಯಂತಿ, ಅರವಿಂದ್‌ ಇದ್ದರು.

ಕೆ.ಆರ್‌.ಪುರಂನಲ್ಲಿರುವ ಉಪ ನಿರ್ದೇಶಕರ ಕಚೇರಿ ರಸ್ತೆಯುದ್ದಕ್ಕೂ ಧರಣಿ ಕುಳಿತಿದ್ದ ನೂರಾರುಅಂಗನವಾಡಿ ಕಾರ್ಯಕರ್ತೆಯರು ಕೋವಿಡ್‌ ನಿಯಂತ್ರಣ ನಿಯಮಗಳನ್ನು ಗಾಳಿಗೆ ತೂರಿದ್ದರು. ಮಾಸ್ಕ್‌ಧರಿಸದೆ, ಅಂತರವನ್ನೂ ಪಾಲಿಸದೆ ಧರಣಿ ಕುಳಿತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.