
ಬಾಗೂರು (ನುಗ್ಗೇಹಳ್ಳಿ): ಹೋಬಳಿಯ ಎಂ ಶಿವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಜಿಎಸ್ ರಮೇಶ್, ಉಪಾಧ್ಯಕ್ಷೆಯಾಗಿ ಸರೋಜಮ್ಮ ಅವಿರೋಧವಾಗಿ ಆಯ್ಕೆಗೊಂಡರು.
ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ವಿಜಯೇಂದ್ರ ಘೋಷಿಸಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕ ಸಿಎಂ ಪುಟ್ಟಸ್ವಾಮಿಗೌಡ, ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದರು.
ತಾಲ್ಲೂಕು ಟಿಎಪಿಎಂಎಸ್ ಅಧ್ಯಕ್ಷ ಮೆಡಿಕಲ್ ವೆಂಕಟೇಶ್, ನಿರ್ದೇಶಕರಾದ ಮರಗೂರು ಅನಿಲ್ ಕುಮಾರ್, ಕುಂಬಾರಹಳ್ಳಿ ರಮೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ವಿಎನ್ ಮಂಜುನಾಥ್, ತಾ.ಪಂ. ಮಾಜಿ ಅಧ್ಯಕ್ಷ ಮರಿ ದೇವೇಗೌಡ, ಮಾಜಿ ಸದಸ್ಯ ಓಬಳಾಪುರ ಬಸವರಾಜ್, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಪುರುಷೋತ್ತಮ್ ಎಸ್.ಡಿ, ಶಂಕರೇಗೌಡ ಕೆ.ಎನ್, ರಾಮಕೃಷ್ಣ, ತಿಮ್ಮಪ್ಪ ಗೌಡ, ರವಿಕುಮಾರ್, ಜಿ.ಎನ್ ರಮೇಶ್, ಜಯಮ್ಮ, ಕಾರ್ಯ ನಿರ್ವಹಣಾಧಿಕಾರಿ ಎಂ.ಎನ್. ದಿನೇಶ್, ಮುಖಂಡರಾದ ರಾಮು, ಮಲಿಂಗೇಗೌಡ, ರಂಗೇಗೌಡ, ಭೂದೇಶ್, ವೈರಮುಡಿ ಗೌಡ, ಪ್ರಸನ್ನ, ಸತೀಶ್, ರಂಗಸ್ವಾಮಿ, ಮಹೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.