ADVERTISEMENT

 ನಿಜಾಮುದ್ದೀನ್ ಜಮಾತ್ನ ಧಾರ್ಮಿಕ ಸಭೆ: ಹಾಸನದಿಂದ 16 ಜನ ಭಾಗವಹಿಸಿದ್ದ ಮಾಹಿತಿ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2020, 8:35 IST
Last Updated 2 ಏಪ್ರಿಲ್ 2020, 8:35 IST

ಹಾಸನ: ಹಾಸನದಿಂದ 16 ಮಂದಿ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲೀಗ್ ಜಮಾತ್ ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಮಾಹಿತಿ ಇದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದರು.

ಅದರಲ್ಲಿ ಈಗ ಆರು ಮಂದಿ ಜಿಲ್ಲೆಯಲ್ಲಿ ಇದ್ದಾರೆ. ಉಳಿದವರು ದೆಹಲಿ, ವಾರಂಗಲ್ ,ಕುಂದಾಪುರ, ಜಮ್ಮು ಕಾಶ್ಮೀರದಲ್ಲಿ ಇರುವ ಮಾಹಿತಿ‌ ಇದೆ. ಹಾಸನ ಜಿಲ್ಲೆಯಲ್ಲಿ ಇರುವವರನ್ನು ಪ್ರತ್ಯೆಕಿಸಿ ನಿಗಾ ವಹಿಸಲಾಗುತ್ತಿದೆ. ಯಾರಿಗೂ ಈ ವರಗೆ ರೋಗ ಲಕ್ಷಣಗಳಿಲ್ಲ.

ಜಿಲ್ಲೆಯಲ್ಲಿ ಇರುವ ಆರು ಮಂದಿಯಲ್ಲಿ ಒಬ್ಬರು ಕೊಡಗಿನವರು ಸೇರಿದ್ದು ಅವರೂ ಹೋಂ ಕ್ವಾರಂಟೈನ್ ನಲ್ಲಿ ಇದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.