ಹಾಸನ: ಕೋವಿಡ್ ಲಸಿಕೆ ಪಡೆದ 20 ದಿನದ ಬಳಿಕ ನಗರದ ಸಿಎಸ್ಐ ಮಿಷನ್ ಆಸ್ಪತ್ರೆ ಡಿ ದರ್ಜೆ ನೌಕರ ಶುಕ್ರವಾರಮೃತಪಟ್ಟಿದ್ದಾರೆ.
ಬೇಲೂರು ತಾಲ್ಲೂಕಿನ ನೆಟ್ಟೆಕೆರೆ ಗ್ರಾಮದ ಸುರೇಶ್ (44) ಬೆಳಿಗ್ಗೆ ತಮ್ಮ ಮನೆಯಲ್ಲಿ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಮಿಷನ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸಲಿಲ್ಲ.
‘ಸುರೇಶ್ಗೆ ಯಾವುದೇ ಕಾಯಿಲೆ ಇರಲಿಲ್ಲ. ಕೋವಿಡ್ ಲಸಿಕೆ ಅಡ್ಡ ಪರಿಣಾಮದಿಂದಲೇ ಮೃತಪಟ್ಟಿರುವ
ಸಾಧ್ಯತೆ ಇದೆ. ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಮೃತರ ಸಂಬಂಧಿಕರು ಆಗ್ರಹಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ‘ಈವರೆಗೆ ಕೋವಿಡ್ ಲಸಿಕೆ ಪಡೆದವರಿಗೆ ಯಾವುದೇ ತೊಂದರೆ ಆಗಿಲ್ಲ. ಪ್ರಾಥಮಿಕ ವರದಿ ಪ್ರಕಾರ ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿರಬಹುದು.ಮರಣೋತ್ತರ ಪರೀಕ್ಷೆ ಬಳಿಕ ನಿಖರ ಕಾರಣ ತಿಳಿದು ಬರಲಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.