ADVERTISEMENT

ಕೋವಿಡ್‌-19: ಚಿಕಿತ್ಸೆಗೆ ಸ್ಪಂದಿಸದೆ 20 ಮಂದಿ ಸಾವು‌

ಒಂದೇ ದಿನ 2540 ಮಂದಿಗೆ ಕೊರೊನಾ ಪಾಸಿಟಿವ್

​ಪ್ರಜಾವಾಣಿ ವಾರ್ತೆ
Published 7 ಮೇ 2021, 14:01 IST
Last Updated 7 ಮೇ 2021, 14:01 IST
   

ಹಾಸನ: ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ 2540 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ 20 ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 50,583 ಕ್ಕೆ ಏರಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 13482 ತಲುಪಿದೆ. ಈವರೆಗೆ ಕಾಯಿಲೆಯಿಂದ ಅಸುನೀಗಿದವರ ಸಂಖ್ಯೆ 660. 105 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 36461 ಮಂದಿ ಆರೋಗ್ಯದಲ್ಲಿ ಚೇತರಿಕೆಯಾಗಿದೆ.

ಹೊಸದಾಗಿ ಆಲೂರು ತಾಲ್ಲೂಕಿನ 141, ಅರಕಲಗೂಡು 223, ಅರಸೀಕೆರೆ 316, ಬೇಲೂರು 315, ಚನ್ನರಾಯಪಟ್ಟಣ 484, ಹಾಸನ 670, ಹೊಳೆನರಸೀಪುರ 231, ಸಕಲೇಶಪುರ 144, ಇತರೆ ಜಿಲ್ಲೆಯ 16 ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ ಕುಮಾರ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.