ADVERTISEMENT

ವಿದ್ಯುತ್ ಸ್ಪರ್ಶ: ಮರದ ಮೇಲೆ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2020, 11:59 IST
Last Updated 6 ಸೆಪ್ಟೆಂಬರ್ 2020, 11:59 IST
ರಾಮನಾಥಪುರ ಹೋಬಳಿಯ ರಾಗಿಮರೂರು ಗ್ರಾಮದಲ್ಲಿ ಮರಕ್ಕೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತಪಟ್ಟಿರುವುದು
ರಾಮನಾಥಪುರ ಹೋಬಳಿಯ ರಾಗಿಮರೂರು ಗ್ರಾಮದಲ್ಲಿ ಮರಕ್ಕೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತಪಟ್ಟಿರುವುದು   

ಕೊಣನೂರು: ಆಡು, ಕುರಿಗೆ ಸೊಪ್ಪು ಕಡಿಯಲು ಮರ ಏರಿದ್ದಾಗ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಮರದ ಮೇಲೆ ಮೃತಪಟ್ಟಿದ್ದಾರೆ.

ರಾಮನಾಥಪುರ ಹೋಬಳಿಯ ರಾಗಿಮರೂರು ಗ್ರಾಮದ ಧರ್ಮ (38) ಮೃತವ್ಯಕ್ತಿ.

ಭಾನುವಾರ ಮಧ್ಯಾಹ್ನ ಮರ ಏರಿದ ಅವರು, ಅದೇ ಮರದ ಮೇಲೆ ಹಾದುಹೋಗಿದ್ದ ವಿದ್ಯುತ್ ತಂತಿಯನ್ನು ಗಮನಿಸಲಿಲ್ಲ. ಸೊಪ್ಪು ಕಡಿಯುವಾಗ ಮರಕ್ಕೆ ವಿದ್ಯುತ್‌ ತಂತಿ ಸ್ಪರ್ಶಿಸಿದೆ.

ADVERTISEMENT

ಧರ್ಮ ಅವರು ಚಾಲಕರಾಗಿದ್ದು, ಭಾನುವಾರ ಕುರಿ ಮೇಯಿಸಲು ಹೋಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.