ADVERTISEMENT

ಅರಕಲಗೂಡು: ‘ಬಾಣಂತಿ, ಮಕ್ಕಳ ಅಪೌಷ್ಟಿಕತೆ ನಿವಾರಿಸಿ’

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2023, 5:17 IST
Last Updated 25 ಫೆಬ್ರುವರಿ 2023, 5:17 IST
ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣದಲ್ಲಿ ಆಯೋಜಿಸಿದ್ದ ಆರೋಗ್ಯ ಅಮೃತ ಅಭಿಯಾನವನ್ನು ಗ್ರಾ.ಪಂ. ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಉದ್ಘಾಟಿಸಿದರು. ಡಾ. ಕೌಶಿಕ್, ಅರುಣಕುಮಾರ್, ಲಕ್ಷ್ಮಣಗೌಡ ಇದ್ದರು.
ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣದಲ್ಲಿ ಆಯೋಜಿಸಿದ್ದ ಆರೋಗ್ಯ ಅಮೃತ ಅಭಿಯಾನವನ್ನು ಗ್ರಾ.ಪಂ. ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ಉದ್ಘಾಟಿಸಿದರು. ಡಾ. ಕೌಶಿಕ್, ಅರುಣಕುಮಾರ್, ಲಕ್ಷ್ಮಣಗೌಡ ಇದ್ದರು.   

ಅರಕಲಗೂಡು: ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸರ್ಕಾರ ಒದಗಿಸುವ ಪೌಷ್ಟಿಕಾಂಶವುಳ್ಳ ಆಹಾರ ಸಾಮಗ್ರಿಗಳನ್ನು ತಲುಪಿಸುವ ಮೂಲಕ ಬಾಣಂತಿಯರು ಮತ್ತು ಮಕ್ಕಳ ಅಪೌಷ್ಟಿಕತೆ ಹೋಗಲಾಡಿಸಬೇಕು ಎಂದು ಮಲ್ಲಿಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಆರ್. ರಂಗಸ್ವಾಮಿ ತಿಳಿಸಿದರು.

ತಾಲ್ಲೂಕಿನ ಮಲ್ಲಿಪಟ್ಟಣ ಸಮುದಾಯ ಭವನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹೆಲ್ತ್ ಪ್ರಮೋಷನ್ ಟ್ರಸ್ಟ್, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿಗಳ ಆಶ್ರಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಆರೋಗ್ಯ ಅಮೃತ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಮತ್ತು ಬಾಣಂತಿಯರಲ್ಲಿ ಅಪೌಷ್ಟಿಕತೆ ನಿವಾರಿಸಲು ಸರ್ಕಾರ ಪೌಷ್ಟಿಕಾಂಶವುಳ್ಳ ಆಹಾರ ಸಾಮಗ್ರಿಗಳನ್ನು ನೀಡುತ್ತಿದ್ದು, ಇವುಗಳನ್ನು ಸಮರ್ಪಕವಾಗಿ ತಲುಪಿಸಬೇಕು. ಗ್ರಾಮೀಣ ಭಾಗದ ಜನರ ಆರೋಗ್ಯ ಕಾಪಾಡಬೇಕು. ಸ್ವಚ್ಛತೆಗೆ ಒತ್ತು ನೀಡಬೇಕು ಎಂದರು.

ADVERTISEMENT

ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಕೌಶಿಕ್ ಮಾತನಾಡಿದರು. ಪಿಡಿಒ ಅರುಣ್ ಕುಮಾರ್, ಮಾಜಿ ಉಪಾಧ್ಯಕ್ಷೆ ಜಯಲಕ್ಷ್ಮೀ, ಸದಸ್ಯರಾದ ಸುಮಿತ್ರಮ್ಮ, ಪೂಜಾ, ಪ್ರಕಾಶ್, ಚಂದ್ರೇಗೌಡ, ಆರೋಗ್ಯ ನಿರೀಕ್ಷಕ ಲಕ್ಷ್ಮಣಗೌಡ, ಶುಶ್ರೂಷಕಿಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.