ಹಳೇಬೀಡು: ಎಸ್ಜಿಆರ್ ಪಬ್ಲಿಕ್ ಶಾಲೆ ಆಶ್ರಯದಲ್ಲಿ ಗುರುವಾರ ಪರಿಸರ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಯಿತು.
ಶಾಲೆಯ ಕಾರ್ಯದರ್ಶಿ ಎಚ್.ಆರ್.ಸುರೇಶ್ ಜಾಥಾಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಘೋಷಣೆ ಕೂಗುತ್ತ ಮೆರವಣಿಗೆಯಲ್ಲಿ ಸಾಗಿದರು. ಶಾಲೆಯ ಸ್ಕೌಟ್ಸ್, ಗೈಡ್ಸ್ ಘಟಕದವರು ಜಾಥಾಕ್ಕೆ ಕೈ ಜೋಡಿಸಿದ್ದರು. ಮುಖ್ಯ ಶಿಕ್ಷಕರಾದ ಸಿದ್ದೇಶ್, ಮಮತ.ಬಿ.ಎಲ್ ಪಾಲ್ಗೊಂಡಿದ್ದರು.
ಪರಿಸರ ಜಾಗೃತಿ: ಹಗರೆ ಗ್ರಾಮದ ದೇವಿರಮ್ಮ ವನಸಿರಿ ಬಳಗದ ಆಶ್ರಯದಲ್ಲಿ ಲಿಂಗಪ್ಪನಕೊಪ್ಪಲು ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ನಂತರ ಶಾಲಾ ಮೈದಾನದಲ್ಲಿ ಗಿಡ ನೆಡಲಾಯಿತು. ಪರಿಸರ ಪ್ರಿಯ ಸಾಲು ಮರದ ಸದಾಶಿವಯ್ಯ ವಿದ್ಯಾರ್ಥಿಗಳಿಗೆ ಪರಿಸರದ ಜಾಗೃತಿ ಮೂಡಿಸಿದರು.
ಮುಖ್ಯ ಶಿಕ್ಷಕ ತಾರೇಶ ನಾಯ್ಕ.ಕೆ.ಸಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಲೋಕೇಶಪ್ಪ, ರವಿಶಂಕರ, ವೀಣಾ, ಲಕ್ಷ್ಮಣ, ಮಹಾದೇವಮ್ಮ, ತಾಜುನ್ನಿಸಾ, ಸುಜಾತಾ, ಗಿರಿಜಮ್ಮ, ಲೋಕೇಶ್, ಬಸವರಾಜು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.