ADVERTISEMENT

ರವಿಶಂಕರ್ ಗೆಲ್ಲಿಸಲು ಶ್ರಮಿಸಿ: ಸುರಾನ

​ಪ್ರಜಾವಾಣಿ ವಾರ್ತೆ
Published 18 ಮೇ 2022, 15:37 IST
Last Updated 18 ಮೇ 2022, 15:37 IST
ಹಾಸನದಲ್ಲಿ ನಡೆದ ಬಿಜೆಪಿ ಚುನಾವಣೆ ನಿರ್ಮಿತಿ ಸಮಿತಿ ಸಭೆಯಲ್ಲಿ ಶಾಸಕ ಪ್ರೀತಂ ಗೌಡ ಮಾತನಾಡಿದರು. ನಿರ್ಮಲ್ ಕುಮಾರ್ ಸುರಾನ, ಎಚ್.ಕೆ.ಸುರೇಶ್, ಎಚ್.ಎಂ.ವಿಶ್ವನಾಥ್, ಯೋಗಾ ರಮೇಶ್‌, ಚಂದ್ರಕಲಾ ಇದ್ದಾರೆ.
ಹಾಸನದಲ್ಲಿ ನಡೆದ ಬಿಜೆಪಿ ಚುನಾವಣೆ ನಿರ್ಮಿತಿ ಸಮಿತಿ ಸಭೆಯಲ್ಲಿ ಶಾಸಕ ಪ್ರೀತಂ ಗೌಡ ಮಾತನಾಡಿದರು. ನಿರ್ಮಲ್ ಕುಮಾರ್ ಸುರಾನ, ಎಚ್.ಕೆ.ಸುರೇಶ್, ಎಚ್.ಎಂ.ವಿಶ್ವನಾಥ್, ಯೋಗಾ ರಮೇಶ್‌, ಚಂದ್ರಕಲಾ ಇದ್ದಾರೆ.   

ಹಾಸನ: ‘ಜೂನ್‍ನಲ್ಲಿ ನಡೆಯುವ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಅಭ್ಯರ್ಥಿ ಮೈ.ವಿ.ರವಿಶಂಕರ್ ಗೆಲುವಿಗೆ ಶ್ರಮಿಸಬೇಕು’ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಕಾರ್ಯಕರ್ತರಿಗೆ ತಿಳಿಸಿದರು.

ನಗರದ ಶಂಕರ ಮಠದ ಭಾರತೀ ತೀರ್ಥ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಬಿಜೆಪಿ ಜಿಲ್ಲಾ ಚುನಾವಣೆ ನಿರ್ವಹಣೆ ಸಮಿತಿ ಹಾಗೂ ಪ್ರಮುಖರ ಸಭೆಯಲ್ಲಿ ಮಾತನಾಡಿದರು.

‘ರವಿಶಂಕರ್ ಮೂರು ದಶಕಕ್ಕೂ ಹೆಚ್ಚು ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಅದರಲ್ಲೂ ಈ ಭಾಗದಲ್ಲಿ ಚಿರಪರಿಚಿತರಾಗಿದ್ದಾರೆ. ಸರಳ ವ್ಯಕ್ತಿಯಾಗಿದ್ದು, ಜನರಲ್ಲೂ ಇವರ ಮೇಲೆ ಅನುಕಂಪ ಇದೆ. ಜನಪರ ಕೆಲಸವನ್ನು ಪದವೀಧರ ಮತದಾರರ ಬಳಿ ಕೊಂಡೂಯ್ದು ತಿಳಿಸುವ ಕೆಲಸ ಮಾಡಬೇಕು’ ಎಂದರು.

ADVERTISEMENT

ಶಾಸಕ ಪ್ರೀತಂ ಜೆ.ಗೌಡ ಮಾತನಾಡಿ, ‘ಕಳೆದ ಬಾರಿ ರವಿಶಂಕರ್ ಅವರು ಕಡಿಮೆ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಈ ಬಾರಿ ಅತ್ಯಧಿಕ ಮತಗಳ ಅಂತರದಿಂದ ಜಯಗಳಿಸುವುದರಲ್ಲಿ ಯಾವುದೇ ಸಂಶಯ ಇಲ್ಲ. ಆ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡುತ್ತೇವೆ’ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ.ಸುರೇಶ್ ಸಭೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಪ್ರಭಾರಿಗಳಾದ ನಿಜಗುಣ ರಾಜು, ಎಚ್‌.ಎಂ. ವಿಶ್ವನಾಥ್, ಮುಖಂಡರಾದ ನವಿಲೆ ಅಣ್ಣಪ್ಪ, ರೇಣುಕುಮಾರ್, ಯೋಗಾರಮೇಶ್, ಚುನಾವಣೆ ಸಂಚಾಲಕಿ ಚಂದ್ರಕಲಾ, ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್, ಕೆಎಸ್‍ಆರ್‌ಟಿಸಿ ನಿಗಮದ ಉಪಾಧ್ಯಕ್ಷ ಈಶ್ವರಪ್ಪ, ಕಾಟೀಕೆರೆ ಪ್ರಸನ್ನ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.