ADVERTISEMENT

ಹೂತಿದ್ದ ಶವ ಹೊರ ತೆಗೆದು ಪರೀಕ್ಷೆ

ಎರಡು ವರ್ಷದ ಮಗು ಅನುಮಾಸ್ಪದ ಸಾವು

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 2:54 IST
Last Updated 26 ಜನವರಿ 2021, 2:54 IST
2 ವರ್ಷದ ತನ್ಮಯ್
2 ವರ್ಷದ ತನ್ಮಯ್   

ನುಗ್ಗೇಹಳ್ಳಿ: ಹೋಬಳಿಯ ಹುಲ್ಲೇನಹಳ್ಳಿ ಗ್ರಾಮದಲ್ಲಿ ಎರಡು ವರ್ಷದ ಗಂಡು ಮಗು ಅನುಮಾನಾಸ್ಪದವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಹೂತ್ತಿದ್ದ ಶವ ಹೊರ ತೆಗೆದು ಪರೀಕ್ಷೆ ನಡೆಸಲಾಯಿತು.

ಗ್ರಾಮದ ನಂಜಪ್ಪ, ಸುಮಾ ದಂಪತಿಯ ಮಗು ಜ. 19 ರಂದು ಮನೆಯಲ್ಲೇ ಮೃತಪಟ್ಟಿತ್ತು. ಕುಟುಂಬಸ್ಥರು ಅಂದೇ ತಮ್ಮ ತೋಟದಲ್ಲಿ ಅಂತ್ಯಸಂಸ್ಕಾರ ಮಾಡಿದ್ದರು. ಆದರೆ, ಸಾವಿನ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಮಗುವಿನ ತಂದೆ ನುಗ್ಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸೋಮವಾರ ಹೂತಿದ್ದ ಶವವನ್ನು ಹೊರತೆಗೆದು, ತಹಶೀಲ್ದಾರ್ ಜೆ.ಬಿ. ಮಾರುತಿ, ಡಿವೈಎಸ್ಪಿ ಲಕ್ಷ್ಮೇಗೌಡ, ವೃತ್ತ ನಿರೀಕ್ಷಕ ಜಿ.ಕೆ. ಸುಬ್ರಹ್ಮಣ್ಯ ಅವರ ಸಮ್ಮುಖದಲ್ಲಿ ಡಾ.ಸಂತೋಷ್ ಪರೀಕ್ಷೆ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.