ADVERTISEMENT

ಕೆರೆಯ ಹೂಳಿನಲ್ಲಿ ಸಿಲುಕಿ ನಾಲ್ವರು ಬಾಲಕರು ಸಾವು

​ಪ್ರಜಾವಾಣಿ ವಾರ್ತೆ
Published 16 ಮೇ 2024, 19:30 IST
Last Updated 16 ಮೇ 2024, 19:30 IST
<div class="paragraphs"><p>ಮುಳುಗಿ  ನಾಲ್ವರು ಸಾವು</p></div>

ಮುಳುಗಿ ನಾಲ್ವರು ಸಾವು

   

ಆಲೂರು (ಹಾಸನ ಜಿಲ್ಲೆ): ತಾಲ್ಲೂಕಿನ ಕದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತಿಗೆಪುರದ ಕೆರೆಯಲ್ಲಿ ಗುರುವಾರ ಈಜಲು ಹೋಗಿದ್ದ ನಾಲ್ವರು ಬಾಲಕರು ಹೂಳಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಪೃಥ್ವಿರಾಜ್ (14), ವಿಶ್ವಾಸ್ (13), ಜೀವನ್ (13), ಸಾತ್ವಿಕ್ (13) ಮೃತರು. ಬೇಲೂರು ತಾಲ್ಲೂಕು ಮದಘಟ್ಟ ಗ್ರಾಮದ ಸಾತ್ವಿಕ್, ರಜೆ ಹಿನ್ನೆಲೆಯಲ್ಲಿ ಮುತ್ತಿಗೆಪುರದ ಅಜ್ಜಿ ಮನೆಗೆ ಬಂದಿದ್ದ. ಎರಡು ತಿಂಗಳ ಹಿಂದೆ ಈತನ ತಂದೆ ಮೃತಪಟ್ಟಿದ್ದರು.

ADVERTISEMENT

ಎಲ್ಲ ಮಕ್ಕಳು ಕೂಲಿ ಕಾರ್ಮಿಕರ ಕುಟುಂಬದವರು. ವಿಶ್ವಾಸ್, ಆಶಾ ಕಾರ್ಯಕರ್ತೆ ಪುಷ್ಪಲತಾ ಅವರ ಮಗ. ನಾಲ್ವರು ಪೋಷಕರಿಗೂ ಒಬ್ಬೊಬ್ಬರೇ ಗಂಡು ಮಕ್ಕಳಿದ್ದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.