ಹಾಸನ: ಸರ್ಕಾರಿಶಾಲಾ-ಕಾಲೇಜು ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡಲುಸರ್ಕಾರ ಈಗಾಗಲೇ ನಿರ್ಧರಿಸಿದ್ದು, ಖಾಸಗಿ ಶಾಲಾ ಮಕ್ಕಳಿಗೂ ಉಚಿತ ಪಾಸ್ ನೀಡುವ ಬಗ್ಗೆ ಸಿಎಂ ವರದಿ ಕೇಳಿದ್ದಾರೆ. ಇದರ ಬಗ್ಗೆಶೀಘ್ರ ತೀರ್ಮಾನ ಕೈಗೊಳ್ಳುತ್ತಾರೆ ಎಂದುಪ್ರಾಥಮಿಕ-ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿಕೆ ನೀಡಿದ್ದಾರೆ.
ಸೈಕಲ್ ವಿತರಣೆಯಲ್ಲಿ ಯಾವುದೇ ಗೊಂದಲವಿಲ್ಲ.ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳುತ್ತೇವೆ.ಯಾವ ಮಗವೂ ಶಾಲೆಯಿಂದ ಹೊರಗುಳಿಯಬಾರದು ಎಲ್ಲರಿಗೂ ಶಿಕ್ಷಣ ದೊರೆಯಬೇಕು ಎಂದರು.
ಮಕ್ಕಳಲ್ಲಿ ಪರೀಕ್ಷಾ ಭಯ ಹೋಗಲಾಡಿಸಲು ತೆರೆದ ಪುಸ್ತಕ ಪರೀಕ್ಷೆ ಜಾರಿಗೆಚಿಂತನೆ ನಡೆಯುತ್ತಿದೆ.ತಜ್ಞರ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.