ADVERTISEMENT

ಉಚಿತ ಲಸಿಕೆ ಆಶ್ವಾಸನೆ ಈಡೇರಲಿ

ಲಸಿಕೆಗೆ ಬಜೆಟ್‌ನಲ್ಲಿ ಮೀಸಲಿಟ್ಟ ₹36 ಸಾವಿರ ಕೋಟಿ ಲೆಕ್ಕ ಕೊಡಿ; ಪ್ರಜ್ವಲ್‍

​ಪ್ರಜಾವಾಣಿ ವಾರ್ತೆ
Published 8 ಜೂನ್ 2021, 15:54 IST
Last Updated 8 ಜೂನ್ 2021, 15:54 IST
ಹಾಸನದ ಹೊಸಲೈನ್‌ ರಸ್ತೆಯಲ್ಲಿರುವ ಹ್ಯುಮಾನಿಟೇರಿಯನ್‌ ಕೋವಿಡ್ ಆರೈಕೆ ಕೇಂದ್ರಕ್ಕೆ ಸಂಸದ ಪ್ರಜ್ವಲ್‌ ರೇವಣ್ಣ ಭೇಟಿ ನೀಡಿ ಪರಿಶೀಲಿಸಿದರು. ಡಾ.ಶರೀಫ್‌, ಸದರುಲ್ಲ ಖಾನ್, ಅತಿಖ್‌ ಉರ್ ರೆಹಮಾನ್‌ ಇದ್ದಾರೆ
ಹಾಸನದ ಹೊಸಲೈನ್‌ ರಸ್ತೆಯಲ್ಲಿರುವ ಹ್ಯುಮಾನಿಟೇರಿಯನ್‌ ಕೋವಿಡ್ ಆರೈಕೆ ಕೇಂದ್ರಕ್ಕೆ ಸಂಸದ ಪ್ರಜ್ವಲ್‌ ರೇವಣ್ಣ ಭೇಟಿ ನೀಡಿ ಪರಿಶೀಲಿಸಿದರು. ಡಾ.ಶರೀಫ್‌, ಸದರುಲ್ಲ ಖಾನ್, ಅತಿಖ್‌ ಉರ್ ರೆಹಮಾನ್‌ ಇದ್ದಾರೆ   

ಹಾಸನ: ಜೂನ್‌ 21ರಿಂದ ದೇಶದ 18 ವರ್ಷ ಮೇಲ್ಪಟ್ಟವರಿಗೆಲ್ಲ ಉಚಿತ ಲಸಿಕೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿರುವುದು ಆಶ್ವಾಸನೆ ಅಷ್ಟೇ. ಅದರಬದಲು ಕೆಲಸ ಮಾಡಿ ತೋರಿಸಲಿ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.

ಕೊರೊನಾ ಲಸಿಕೆಗಾಗಿ ಕಳೆದ ಬಜೆಟ್‍ನಲ್ಲಿ ₹35 ಸಾವಿರ ಕೋಟಿ ಮೀಸಲಿಟ್ಟರು. ಆಹಣ ಎಲ್ಲಿಗೆ ಹೋಯಿತು, ಎಷ್ಟು ಜನರಿಗೆ ಲಸಿಕೆ ಕೊಟ್ಟಿದ್ದಾರೆ ಎಂಬ ಪ್ರಶ್ನೆಗೆ ಉತ್ತರಸಿಕ್ಕಿಲ್ಲ ಎಂದು ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಪ್ರಧಾನಿ ಕೇವಲ ಘೋಷಣೆ ಮಾಡುತ್ತಿದ್ದಾರೆ. ಇಂತಹ ಆಶ್ವಾಸನೆಗಳನ್ನು ಬಹಳಕೇಳಿದ್ದೇವೆ. ರಾಜ್ಯದಲ್ಲಿ ನಿತ್ಯ 15 –18 ಸಾವಿರ ಕೊರೊನಾ ಪಾಸಿಟಿವ್ ಪ್ರಕರಣವರದಿಯಾಗುತ್ತಿದೆ. ಕೊರೊನಾ ಸಂಪೂರ್ಣ ತೊಲಗಿತು ಎಂದು ಭಾವಿಸಿ ಅನ್‍ಲಾಕ್ ಮಾಡಿದರೆ ಜನಸಂಚಾರ ಹೆಚ್ಚಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಸಾಧ್ಯತೆಯಿದೆ.ಆದ್ದರಿಂದ ಇನ್ನಷ್ಟು ದಿನ ಲಾಕ್‍ಡೌನ್ ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಹಾಸನದಲ್ಲಿ ಸಾವಿನ ಪ್ರಮಾಣ ಕಡಿಮೆಯಾಗಿಲ್ಲ. ನಿತ್ಯ 10 ರಿಂದ 15 ಜನ ಮೃತಪಡುತ್ತಿದ್ದಾರೆ. ಎಲ್ಲರಿಗೂ ಕೋವಿಡ್‌ ಪರೀಕ್ಷೆ ಮಾಡುತ್ತಿಲ್ಲ. ರೋಗ ಲಕ್ಷಣ ಇದ್ದವರನ್ನು ಮಾತ್ರ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಸರಿಯಾಗಿ ಪರೀಕ್ಷೆ ನಡೆದರೆಪಾಸಿಟಿವಿಟಿ ದರ ಇನ್ನೂ ಹೆಚ್ಚುತ್ತದೆ ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆಬಿಜೆಪಿಯವರೇ ಮಾತನಾಡುತ್ತಿದ್ದಾರೆ. ಸಿ.ಎಂಬದಲಾಗುತ್ತಾರೆಯೇ ಎಂಬ ಪ್ರಶ್ನೆಗೆ ನಾನು ಹೇಗೆ ಉತ್ತರಿಸಲಿ? ಯಾರನ್ನು ಬೀಳಿಸಬೇಕು, ಯಾರನ್ನು ಏಳಿಸಬೇಕು ಎನ್ನುವುದು ಅವರಿಗೆ ಬಿಟ್ಟ ವಿಚಾರ ಎಂದುಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.