ADVERTISEMENT

ಗೃಹಲಕ್ಷ್ಮಿ, ಗೃಹಜ್ಯೋತಿ ನೋಂದಣಿಗೆ ಹಣ: ದೂರು

​ಪ್ರಜಾವಾಣಿ ವಾರ್ತೆ
Published 30 ಜುಲೈ 2023, 12:39 IST
Last Updated 30 ಜುಲೈ 2023, 12:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹೊಳೆನರಸೀಪುರ: ತಾಲ್ಲೂಕಿನ ಹಳೇಕೋಟೆ ಹೋಬಳಿಯ ದೊಡ್ಡಕುಂಚೇವು ಗ್ರಾಮದ ‘ಗ್ರಾಮ ಒನ್’ ಕೇಂದ್ರದಲ್ಲಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗೆ ಆನ್‍ಲೈನ್‍ನಲ್ಲಿ ಅರ್ಜಿ ಹಾಕಲು ಪ್ರತಿಯೊಬ್ಬರಿಂದ ₹ 100 ವಸೂಲಿ ಮಾಡುತ್ತಿದ್ದಾರೆಂದು ಗ್ರಾಮಸ್ಥರು ದೂರಿದ್ದಾರೆ.

ಹಣ ಪಡೆಯುವ ದೃಶ್ಯವನ್ನು ಮೊಬೈಲ್‍ನಲ್ಲಿ ರೆಕಾರ್ಡ್ ಮಾಡಿ ಮಾಧ್ಯಮಗಳಿಗೆ ಕಳುಹಿಸಿದ್ದಾರೆ. ಈ ಬಗ್ಗೆ ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಅವರ ಗಮನಕ್ಕೆ ತರಲಾಗಿದ್ದು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

‘ಈ ಕೇಂದ್ರದಲ್ಲಿ 500ಕ್ಕೂ ಹೆಚ್ಚು ಅರ್ಜಿಗಳನ್ನು ದಾಖಲಿಸಿದ್ದು ಎಲ್ಲರಿಂದ ₹ 100ನಂತೆ ₹ 50 ಸಾವಿರಕ್ಕೂ ಹೆಚ್ಚು ಹಣ ಗಳಿಸಿದ್ದಾರೆ’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ADVERTISEMENT

‘ಯಾವುದೇ ಕೇಂದ್ರದಲ್ಲಿ ಅರ್ಜಿ ನೋಂದಾಯಿಸಲು ಸರ್ಕಾರ ನಿಗದಿತ ಶುಲ್ಕ ನೀಡುತ್ತದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಕೇಂದ್ರದಲ್ಲಿ ಹಣ ನೀಡಬಾರದು. ಹಣ ಕೇಳಿದರೆ ದೂರು ನೀಡಿ’ ಎಂದು ತಹಶೀಲ್ದಾರ್ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.