ADVERTISEMENT

ಹಾಸನ ಜಿಲ್ಲೆ ಯಾರಿಗೂ ಬರೆದುಕೊಟ್ಟಿಲ್ಲ: ದೇವೇಗೌಡ ಕುಟುಂಬಕ್ಕೆ ಮಾಧುಸ್ವಾಮಿ ಟಾಂಗ್

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2019, 7:22 IST
Last Updated 19 ಸೆಪ್ಟೆಂಬರ್ 2019, 7:22 IST
   

ತುಮಕೂರು : ಹಾಸನ ಜಿಲ್ಲೆ ಕರ್ನಾಟಕದಲ್ಲಿಯೇ ಇದೆ, ಅದನ್ನುಯಾರಿಗೂ ಬರೆದು ಕೊಟ್ಟಿಲ್ಲ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ‌ಎಂದುದೇವೇಗೌಡ ಕುಟುಂಬಕ್ಕೆ ಪರೋಕ್ಷವಾಗಿಟಾಂಗ್‌ ಕೊಟ್ಟಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು' ಆಡಳಿತ ವ್ಯವಸ್ಥೆ ಹಳಿ ಮೇಲೆ ಸರಿಯಾಗಿ ಸಾಗಲಿ, ಅಧಿಕಾರಿಗಳು ಕಾನೂನು ಬದ್ಧವಾಗಿ ಕೆಲಸ ಮಾಡಬೇಕು. ನಿಯಮಬಾಹಿರವಾಗಿ ಕೆಲಸ ಮಾಡಬಾರದು ಎಂಬುದು ನನ್ನ ನಿರೀಕ್ಷೆಯಾಗಿದ್ದು ಅದಕ್ಕೆತಕ್ಕಂತೆ ಅವರು ಕೆಲಸ ಮಾಡುವ ಭರವಸೆ ಇದೆ ಎಂದು ಮಾಧುಸ್ವಾಮಿ‌ಹೇಳಿದರು.

ಹಾಸನದಲ್ಲಿ ರೇವಣ್ಣ ಅವರು ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಾರೆ? ಅವರ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡುವ ಪ್ರಶ್ನೆ ಇಲ್ಲ. ಆ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಸಮರ್ಥವಾಗಿ ಕೆಲಸ ಮಾಡುತ್ತೇನೆ ಎಂಬ ವಿಶ್ವಾಸವಿದೆ ಎಂದು ಮಾಧುಸ್ವಾಮಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.