ಹಾಸನ: ನಗರದ ಹೊಸ ಬಸ್ ನಿಲ್ದಾಣ ಎದುರು ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿಯಲ್ಲಿ
ಸಿಮೆಂಟ್ ಕಂಬಗಳು ಕುಸಿದು ಬಿದ್ದಿವೆ.
ಒಂದು ವರ್ಷದಿಂದ ನಡೆಯುತ್ತಿದ್ದ ಕಾಮಗಾರಿ ಇದಾಗಿದ್ದು, ಜೋಡಣೆ ಮಾಡಿದ್ದ ನಾಲ್ಕು ಭಾರಿ ಗಾತ್ರದ ಸಿಮೆಂಟ್ ಕಂಬಗಳು ಕುಸಿದು ಬಿದ್ದಿವೆ.ಘಟನೆಯಲ್ಲಿ ಸಾವು, ನೋವು ಸಂಭವಿಸಿಲ್ಲ.
ಒಟ್ಟು ₹ 42 ಕೋಟಿ ವೆಚ್ಚದಲ್ಲಿಕೇಂದ್ರ ಮತ್ತು ರಾಜ್ಯದ ಸಹಭಾಗಿತ್ವದಲ್ಲಿ ಕಾಮಗಾರಿ ನಡೆಯುತ್ತಿದೆ.ರೈಲ್ವೆ ಮೇಲ್ಸೇತುವೆಗಾಗಿ ಹಲವು ವರ್ಷಗಳಿಂದ ವಿವಿಧ ಸಂಘಟನೆಗಳು ಹೋರಾಟ ನಡೆಸಿದ್ದವು.
ಕಳಪೆ ಕಾಮಗಾರಿಯಿಂದ ಸಿಮೆಂಟ್ ಕಂಬಗಳು ಕುಸಿದು ಬಿದ್ದಿದ್ದು, ತನಿಖೆ ನಡೆಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.