ADVERTISEMENT

ಹಾಸನ | ಅರಸೀಕೆರೆ: ಭೀಕರ ಅಪಘಾತ– 9 ಸಾವು

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2022, 19:35 IST
Last Updated 15 ಅಕ್ಟೋಬರ್ 2022, 19:35 IST
ಅಪಘಾತ ಚಿತ್ರ
ಅಪಘಾತ ಚಿತ್ರ   

ಹಾಸನ: ಅರಸೀಕೆರೆ ತಾಲ್ಲೂಕಿನ ಬಾಣಾವರ ಬಳಿ ಶನಿವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿ 9 ಜನರು ಮೃತಪಟ್ಟಿದ್ದಾರೆ.

ಧರ್ಮಸ್ಥಳದಿಂದ ವಾಪಸ್‌ ತೆರಳುವ ಸಂದರ್ಭದಲ್ಲಿ ಬಾಣಾವರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ ಮತ್ತು ಕ್ಯಾಂಟರ್‌ ಮಧ್ಯೆ ಟೆಂಪೊ ಟ್ರಾವೆಲ್ಲರ್‌ ಸಿಲುಕಿದ್ದು, ಇದರಲ್ಲಿದ್ದ ಐವರು ವಯಸ್ಕರು ಹಾಗೂ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಟಿಟಿಯಲ್ಲಿ ಒಟ್ಟು 10 ಜನರು ಇದ್ದು, ಅವರಲ್ಲಿ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ವಾಹನದಲ್ಲಿ ಇದ್ದವರು ಎಲ್ಲಿಯವರು ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.