ADVERTISEMENT

ಹಾಸನ ವಿಧಾನಸಭೆ ಚುನಾವಣೆ: ಜೆಡಿಎಸ್ ಅಭ್ಯರ್ಥಿಯಾಗಿ ರಾಜೇಗೌಡರ ಹೆಸರು ಮುನ್ನೆಲೆಗೆ

ಹಾಸನ: ಜೆಡಿಎಸ್‌ನಲ್ಲಿ ತಳಮಳ ಸೃಷ್ಟಿಸಿದ ಪ್ರೀತಂ ದಾಳ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2023, 2:36 IST
Last Updated 16 ಮಾರ್ಚ್ 2023, 2:36 IST
ಕೆ.ಎಂ.ರಾಜೇಗೌಡ
ಕೆ.ಎಂ.ರಾಜೇಗೌಡ   

ಹಾಸನ: ಜಿಲ್ಲೆಯ ಪ್ರತಿಷ್ಠಿತ ಕ್ಷೇತ್ರ, ಹಾಸನದ ಜೆಡಿಎಸ್‌ ಟಿಕೆಟ್‌ ಗೊಂದಲ ಪರಿಹಾರ ಆಗುತ್ತಿಲ್ಲ. ಚುನಾವಣೆ ಹತ್ತಿರವಾದರೂ ಅಭ್ಯರ್ಥಿಯ ಆಯ್ಕೆ ಅಂತಿಮಗೊಂಡಿಲ್ಲ. ಈ ಮಧ್ಯೆ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಎಂ.ರಾಜೇಗೌಡರ ಹೆಸರು ಕೇಳಿ ಬರುತ್ತಿದೆ. ಜೆಡಿಎಸ್‌ ಕಾರ್ಯಕರ್ತರೂ ಗೊಂದಲಕ್ಕೆ ಬಿದ್ದಿದ್ದಾರೆ.

ಈಗಾಗಲೇ ಎಚ್‌.ಡಿ. ದೇವೇಗೌಡ, ಎಚ್‌.ಡಿ. ಕುಮಾರಸ್ವಾಮಿ ಹಾಗೂ ಎಚ್.ಡಿ. ರೇವಣ್ಣ ಅವರು ಕೆ.ಎಂ.ರಾಜೇಗೌಡರೊಂದಿಗೆ ಮಾತನಾಡಿದ್ದು, ಸ್ವರೂಪ್‌ ಮತ್ತು ಭವಾನಿ ಟಿಕೆಟ್‌ಗೆ ಪಟ್ಟು ಹಿಡಿದರೆ, ಅವರನ್ನೇ ಕಣಕ್ಕೆ ಇಳಿಸುವ ಯೋಚನೆಯೂ ಇದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ‘ಭವಾನಿ, ಸ್ವರೂಪ್‌ ಜೊತೆಗೆ ರಾಜೇಗೌಡರ ಹೆಸರೂ ಪ್ರಸ್ತಾಪವಾಗುತ್ತಿದೆ. ನಾಳೆ ನಾಲ್ಕನೇ ಹೆಸರು ಬಂದರೂ ಬರಬಹುದು. ಚುನಾವಣೆ ಘೋಷಣೆಯಾಗುವವರೆಗೆ ಪಟ್ಟಿ ದೊಡ್ಡದಾದರೂ ಆಶ್ಚರ್ಯವಿಲ್ಲ. ಎಲ್ಲವನ್ನೂ ದೇವೇಗೌಡರೇ ನೋಡಿಕೊಳ್ಳಲಿದ್ದಾರೆ’ ಎಂದು ತಿಳಿಸಿದ್ದಾರೆ.

ADVERTISEMENT

ಶಶಿಧರ್‌ ಭೇಟಿ ಮಾಡಿದ ಕುಮಾರಸ್ವಾಮಿ: ಎಚ್‌.ಡಿ. ಕುಮಾರಸ್ವಾಮಿ, ಬುಧವಾರ ಅರಸೀಕೆರೆ ಕ್ಷೇತ್ರದ ಮುಖಂಡ ಬಿ.ಜಿ. ಶಶಿಧರ್‌ ಅವರನ್ನು ಭೇಟಿ ಮಾಡಿದ್ದು, ಪಕ್ಷ ಸೇರುವಂತೆ ಮನವೊಲಿಕೆಗೆ ಪ್ರಯತ್ನಿಸಿದ್ದಾರೆ.

ಮಾಜಿ ಶಾಸಕ ಬಸವರಾಜ ಅವರ ಪುತ್ರ ಶಶಿಧರ್‌, ಈ ಬಾರಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ, ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್‌ಗೆ ಬರುವುದು ಖಚಿತವಾಗುತ್ತಿದ್ದಂತೆಯೇ ಪಕ್ಷ ತೊರೆದಿದ್ದರು.

ಶಶಿಧರ್‌ ಭೇಟಿ ಮಾಡಿದ ಕುಮಾರಸ್ವಾಮಿ
ಹಾಸನ: ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ನಡೆಸಿರುವ ಎಚ್‌.ಡಿ.ಕುಮಾರಸ್ವಾಮಿ, ಬುಧವಾರ ಅರಸೀಕೆರೆ ಕ್ಷೇತ್ರದ ಮುಖಂಡ ಬಿ.ಜಿ. ಶಶಿಧರ್‌ ಅವರನ್ನು ಭೇಟಿ ಮಾಡಿದ್ದು, ಪಕ್ಷ ಸೇರುವಂತೆ ಮನವೊಲಿಕೆಗೆ ಪ್ರಯತ್ನಿಸಿದ್ದಾರೆ.

ಮಾಜಿ ಶಾಸಕ ಬಸವರಾಜ ಅವರ ಪುತ್ರ ಶಶಿಧರ್‌, ಈ ಬಾರಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ, ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್‌ಗೆ ಬರುವುದು ಖಚಿತವಾಗುತ್ತಿದ್ದಂತೆಯೇ ಪಕ್ಷ ತೊರೆದಿದ್ದರು.

‘ಅವರನ್ನು ಜೆಡಿಎಸ್‌ಗೆ ಕರೆತಂದು, ಅರಸೀಕೆರೆ ಕ್ಷೇತ್ರದಲ್ಲಿ ನಿರ್ಣಾಯಕವಾಗಿರುವ ಲಿಂಗಾಯತರ ಮತ ಸೆಳೆಯುವುದರ ಜೊತೆಗೆ, ಪಕ್ಷ ತೊರೆದಿರುವ ಶಿವಲಿಂಗೇಗೌಡರಿಗೂ ತಕ್ಕ ಪಾಠ ಕಲಿಸಬಹುದು’ ಎಂಬ ತಂತ್ರವನ್ನು ಕುಮಾರಸ್ವಾಮಿ ಹೆಣೆದಿದ್ದಾರೆ ಎಂದು ಮೂಲಗಳು ಹೇಳಿವೆ.

*

ಕುಮಾರಣ್ಣ ಸಾಮಾನ್ಯ ಕಾರ್ಯರ್ತನಿಗೆ ಟಿಕೆಟ್ ನೀಡುತ್ತೇನೆ ಎಂದಿದ್ದಾರೆಯೇ ಹೊರತು, ಶಾಸಕನಾಗಿ ಮಾಡುತ್ತೇನೆ ಎಂದಿಲ್ಲ. ಕುಟುಂಬದ ಕಿತ್ತಾಟದಿಂದ ಅವರು ಒತ್ತಡಕ್ಕೆ ಒಳಗಾಗಿದ್ದಾರೆ.
-ಪ್ರೀತಂ ಗೌಡ, ಶಾಸಕ

**

ಕಾರ್ಯಕರ್ತರಿಗೆ ಟಿಕೆಟ್ ನೀಡುವ ವಿಷಯದಲ್ಲಿ ಹಿಂದೆ ಸರಿಯುವುದಿಲ್ಲ. ಅಂತಿಮ ತೀರ್ಮಾನ ಮಾಡುವುದರಲ್ಲಿ ನನಗಿಂತ ಹೆಚ್ಚಾಗಿ ನಮ್ಮ ರಾಷ್ಟ್ರೀಯ ಅಧ್ಯಕ್ಷರಿಗೇ ಅನುಭವ ಇದೆ.
-ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.