ADVERTISEMENT

ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಲಾರಿ ನುಗ್ಗಿ 9 ಜನ ಸಾವು: ಹಾಸನದಲ್ಲಿ ಘೋರ ದುರಂತ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2025, 2:43 IST
Last Updated 13 ಸೆಪ್ಟೆಂಬರ್ 2025, 2:43 IST
<div class="paragraphs"><p>ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಲಾರಿ ನುಗ್ಗಿ 9 ಜನ ಸಾವು: ಹಾಸನದಲ್ಲಿ ಘೋರ ದುರಂತ..</p></div>

ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಲಾರಿ ನುಗ್ಗಿ 9 ಜನ ಸಾವು: ಹಾಸನದಲ್ಲಿ ಘೋರ ದುರಂತ..

   

ಹಾಸನ: ಹಾಸನ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಸರಕು ಲಾರಿ ನುಗ್ಗಿದ್ದು, ಕನಿಷ್ಠ 9 ಜನರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಾಗುತ್ತಿತ್ತು. ಹೆದ್ದಾರಿಯಲ್ಲಿ ಸಾಗುತ್ತಿದ್ದ ಕ್ಯಾಂಟರ್‌ ಲಾರಿಗೆ ಬೈಕ್‌ ಅಡ್ಡ ಬಂದಿದೆ.

ADVERTISEMENT

ಇದನ್ನು ತಪ್ಪಿಸಲು ಕ್ಯಾಂಟರ್ ಚಾಲಕ ಯತ್ನಿಸಿದ್ದಾನೆ. ಈ ವೇಳೆ ರಸ್ತೆ ವಿಭಜಕ ದಾಟಿದ ಕ್ಯಾಂಟರ್‌ ಲಾರಿ ಮೆರವಣಿಗೆ ಮೇಲೆ ಎರಗಿದೆ. ಈ ವೇಳೆ ಸ್ಥಳದಲ್ಲಿದ್ದ 9 ಜನರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಘಟನೆಯಲ್ಲಿ ಮೃತರಾದ ವಿವರವನ್ನು ಸರ್ಕಾರ ಹಂಚಿಕೊಂಡಿದೆ.

New Doc 09-13-2025 07.38.pdf
ಓಪನ್ ಮಾಡಿ

ಸ್ಥಳಕ್ಕೆ ಭೇಟಿ ನೀಡಿದ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ‘ಇದೊಂದು ದುರದೃಷ್ಟಕರ ಘಟನೆ. ಇಲ್ಲಿ ಹಲವರು ಮೃತಪಟ್ಟಿರುವುದಾಗಿ ಮಾಹಿತಿ ಬಂದಿದೆ. ಈ ಘಟನೆ ಆಗಬಾರದಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೂಕ್ತ ತನಿಖೆಯ ನಂತರ ಸ್ಪಷ್ಟ ಕಾರಣ ತಿಳಿಯಲಿದೆ’ ಎಂದರು.

ಸ್ಥಳಕ್ಕೆ ಶಾಸಕ ಎಚ್.ಡಿ. ರೇವಣ್ಣ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.