ADVERTISEMENT

ಹಾಸನ: ಅತ್ತಿ ಚೌಡೇನಹಳ್ಳಿಯಲ್ಲಿ ಕಾಣಿಸಿಕೊಂಡ ಚಿರತೆ, ಜನರಲ್ಲಿ ಆತಂಕ

​ಪ್ರಜಾವಾಣಿ ವಾರ್ತೆ
Published 2 ಜುಲೈ 2021, 11:27 IST
Last Updated 2 ಜುಲೈ 2021, 11:27 IST
ಅತ್ತಿ ಚೌಡೇನಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ಕಾಣಿಸಿಕೊಂಡ ಚಿರತೆ
ಅತ್ತಿ ಚೌಡೇನಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ಕಾಣಿಸಿಕೊಂಡ ಚಿರತೆ    

ಹಾಸನ: ಹೊಳೆನರಸೀಪುರ ತಾಲ್ಲೂಕಿನ ಅತ್ತಿ ಚೌಡೇನಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ಚಿರತೆ ಕಾಣಿಸಿಕೊಂಡಿದ್ದು, ಜನತೆ ಆತಂಕಗೊಂಡಿದ್ದಾರೆ.

ಗ್ರಾಮದ ಕಾಲುವೆ ಏರಿ ಮೇಲೆ ಚಿರತೆ ಓಡಾಡಿರುವ ದೃಶ್ಯವನ್ನು ಸಾರ್ವಜನಿಕರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಚಿರತೆ ಓಡಾಟದಿಂದ ಜನತೆ ಭಯಭೀತರಾಗಿದ್ದು, ಕೂಡಲೇ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ADVERTISEMENT

ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಕೆಲ ದಿನಗಳಿಂದ ಜಾನುವಾರು, ಆಡು, ಕುರಿಗಳನ್ನು ತಿಂದು ಹಾಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.