ADVERTISEMENT

ಹಾಸನ ಟಿಕೆಟ್‌–ಸಭೆ ಕರೆದಿರಲಿಲ್ಲ: ಸಿ.ಎಂ. ಇಬ್ರಾಹಿಂ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2023, 5:28 IST
Last Updated 1 ಮಾರ್ಚ್ 2023, 5:28 IST
   

ಬೇಲೂರು (ಹಾಸನ): ‘ಹಾಸನ ಕ್ಷೇತ್ರದ ಟಿಕೆಟ್‌ಗೆ ಸಂಬಂಧಿಸಿ ಬೆಂಗಳೂರಿನ ಜೆಪಿ ಭವನದಲ್ಲಿ ಭಾನುವಾರ ಯಾವುದೇ ಸಭೆ ಇರಲಿಲ್ಲ.ಪಕ್ಷದ ಅಧ್ಯಕ್ಷನಾಗಿ ನಾನೇ ಸಭೆ ಕರೆಯಬೇಕು’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭವಾನಿ, ಸ್ವರೂಪ್‌ ಸೇರಿದಂತೆ ಪ್ರತಿಯೊಬ್ಬ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಹಕ್ಕಿದೆ. ಯಾರಿಗೆ ಕೊಡಬೇಕೆಂಬುದನ್ನು ಪಕ್ಷ ತೀರ್ಮಾನಿಸುತ್ತದೆ’ ಎಂದರು.

‘ರೇವಣ್ಣ, ಕುಮಾರಸ್ವಾಮಿ, ಬಾಲಕೃಷ್ಣ ಮತ್ತು ರಮೇಶ್ ಸಹೋದರರ ನಡುವೆ ಭಿನ್ನಾಭಿಪ್ರಾಯ ಬರುತ್ತದೆಂದು ಯಾರಾದರೂ ತಿಳಿದಿದ್ದರೆ ಅದು ತಪ್ಪು ಕಲ್ಪನೆ. ಐವತ್ತು ವರ್ಷದಿಂದ ನೋಡುತ್ತಿದ್ದೇನೆ. ಅವರು ಯಾವತ್ತಿದ್ದರೂ ಒಂದೇ’ ಎಂದರು.

ADVERTISEMENT

‘ನಾವು ಈಗಾಗಲೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ್ದೇವೆ. ತಾಕತ್ತಿದ್ದರೆ ಕಾಂಗ್ರೆಸ್‌, ಬಿಜೆಪಿಯವರೂ ಘೋಷಿಸಲಿ’ ಎಂದು ಸವಾಲು ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.