ADVERTISEMENT

ಹಾಸನ: ಹಾಸನಾಂಬೆ ದರ್ಶನಕ್ಕೆ ತೆರೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2021, 15:03 IST
Last Updated 6 ನವೆಂಬರ್ 2021, 15:03 IST
ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಬಂದ್‌ ಮಾಡಿರುವ ದೃಶ್ಯ‌
ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಬಂದ್‌ ಮಾಡಿರುವ ದೃಶ್ಯ‌   

ಹಾಸನ: ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸುವ ಅಧಿದೇವತೆ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲನ್ನು ಶನಿವಾರ ಧಾರ್ಮಿಕ ವಿಧಿವಿಧಾನಗಳ ಮೂಲಕ ಮುಚ್ಚಲಾಯಿತು.

ಅ.28ರಿಂದ ನ.6ರ ವರೆಗೆ ಬಾಗಿಲು ತೆರೆದಿದ್ದ ಸಮಯದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಭಕ್ತರು ದೇವರ ದರ್ಶನ ಪಡೆದರು. ಮಧ್ಯಾಹ್ನ 1.04ಕ್ಕೆ ಗರ್ಭಗುಡಿ ಬಾಗಿಲು ಮುಚ್ಚುತ್ತಿದ್ದಂತೆ ‘ಹಾಸನಾಂಬೆಗೆ ಜೈ’ ಎಂಬ ಜಯಘೋಷ ಭಕ್ತರಿಂದ ಮೊಳಗಿತು.

ಹತ್ತು ದಿನ ದರ್ಶನ ಭಾಗ್ಯ ಕರುಣಿಸಿದ ಅಧಿದೇವತೆ ಮತ್ತೆ ಒಂದು ವರ್ಷ ಮರೆಗೆ ಸರಿದಳು. ಸಂಪ್ರದಾಯದ ಪ್ರಕಾರ ದೇವಿಯ ಸನ್ನಿಧಿಯಲ್ಲಿ ಹೂ, ನೈವೇದ್ಯ ಇಟ್ಟು, ದೀಪ ಹಚ್ಚಲಾಯಿತು. ಕಡೆ ದಿನವೂ ದೇವಿ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು.

ADVERTISEMENT

ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಜಿಲ್ಲಾಧಿಕಾರಿ ಆರ್.ಗಿರೀಶ್, ತಹಶೀಲ್ದಾರ್‌ ನಟೇಶ್‌, ದೇವಾಲಯದ ಆಡಳಿತಾಧಿಕಾರಿ ಬಿ.ಎ.ಜಗದೀಶ್‌‌, ಶಾಸಕ ಪ್ರೀತಂ ಗೌಡ ಬಾಗಿಲುಹಾಕುವಾಗ ಹಾಜರಿದ್ದರು. ಮುಜರಾಯಿ ಇಲಾಖೆ ಅಧಿಕಾರಿಗಳು ಬೀಗ ಹಾಕಿ ಸೀಲ್‌ ಒತ್ತಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.