ADVERTISEMENT

ಹಾಸನಾಂಬ ದರ್ಶನೋತ್ಸವಕ್ಕೆ ತೆರೆ: ಈ ಬಾರಿ 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

ಈ ಬಾರಿ 26 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ l ₹21.82 ಕೋಟಿ ಆದಾಯ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2025, 19:01 IST
Last Updated 23 ಅಕ್ಟೋಬರ್ 2025, 19:01 IST
ಹಾಸನಾಂಬ ದೇವಾಲಯದ ಗರ್ಭಗುಡಿಯ ಬಾಗಿಲನ್ನು ಗುರುವಾರ ಸಚಿವ ಕೃಷ್ಣಬೈರೇಗೌಡ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಮುಚ್ಚಲಾಯಿತು
ಹಾಸನಾಂಬ ದೇವಾಲಯದ ಗರ್ಭಗುಡಿಯ ಬಾಗಿಲನ್ನು ಗುರುವಾರ ಸಚಿವ ಕೃಷ್ಣಬೈರೇಗೌಡ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಮುಚ್ಚಲಾಯಿತು   

ಹಾಸನ: ಜಿಲ್ಲೆಯ ಶಕ್ತಿದೇವತೆ, ಹಾಸನಾಂಬ ದರ್ಶನೋತ್ಸವಕ್ಕೆ ಗುರುವಾರ ತೆರೆ ಬಿದ್ದಿತು. ಮಧ್ಯಾಹ್ನ 1.07ಕ್ಕೆ ಸಕಲ ವಿಧಿವಿಧಾನಗಳೊಂದಿಗೆ ಹಾಸನಾಂಬ ದೇಗುಲದ ಗರ್ಭಗುಡಿಯ ಬಾಗಿಲು ಬಂದ್ ಮಾಡಲಾಯಿತು. 

ಸಂಪ್ರದಾಯದಂತೆ ಪೂಜೆ, ನೈವೇದ್ಯ ಸಲ್ಲಿಸಿ ನಂದಾದೀಪ ಹಚ್ಚಿಟ್ಟ ಅರ್ಚಕರು, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ಗರ್ಭಗುಡಿಯ ಬಾಗಿಲಿಗೆ ಬೀಗ ಹಾಕಿ ಕೀಲಿಯನ್ನು ದೇವಾಲಯದ ಆಡಳಿತಾಧಿಕಾರಿಗೆ ಹಸ್ತಾಂತರಿಸಿದರು.

ಈ ಬಾರಿ 26 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದು, ಟಿಕೆಟ್, ಲಡ್ಡುಪ‍್ರಸಾದ ಮಾರಾಟದಿಂದ ₹ 21.82 ಕೋಟಿ ಆದಾಯ ಸಂಗ್ರಹವಾಗಿದೆ. 

ADVERTISEMENT

ಮುಂದಿನ ವರ್ಷ ಅ.29ರಿಂದ ನ.11ರವರೆಗೆ ಹಾಸನಾಂಬ ದೇಗುಲದ ಬಾಗಿಲು ತೆರೆಯಲಿದ್ದು, ಭಕ್ತರಿಗೆ ದರ್ಶನ ಲಭ್ಯವಾಗಲಿದೆ.

ಗರ್ಭಗುಡಿಯ ಬಾಗಿಲು ಮುಚ್ಚುವುದಕ್ಕೂ ಮುನ್ನ ಸಿದ್ದೇಶ್ವರ ಸ್ವಾಮಿ ರಥೋತ್ಸವ ಹಾಗೂ ಕೆಂಡೋತ್ಸವ ಸಂಭ್ರಮದಿಂದ ನೆರವೇರಿತು. ಜಿಲ್ಲಾಧಿಕಾರಿ ಲತಾಕುಮಾರಿ ಅವರು ಕೆಂಡ ಹಾಯ್ದು ಗಮನಸೆಳೆದರು.

ಬಳಿಕ ಮಾತನಾಡಿದ ಅವರು, ‘ಕಳಸ ಹೊತ್ತ ಭಕ್ತರು ಕೆಂಡ ಹಾಯ್ದದ್ದು ನೋಡಿ ನನಗೂ ಇಂಗಿತ ಬಂತು. ಮೊದಲು ಭಯವಾಯಿತು, ನಂತರ ಭಕ್ತಿಯಿಂದ ಕೈ ಮುಗಿದು ಹೋದೆ. ಏನೂ ಆಗಲಿಲ್ಲ’ ಎಂದು ಅನುಭವ ಹಂಚಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.