ಹಾಸನ: ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವಕ್ಕೆ ಶುಕ್ರವಾರ ತೆರೆ ಬೀಳಲಿದೆ. ಮಧ್ಯಾಹ್ನ ವಿಶ್ವರೂಪ ದರ್ಶನ ನಂತರ 12.30ಕ್ಕೆ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ.
ಸಾರ್ವಜನಿಕ ದರ್ಶನಕ್ಕೆ ಕೊನೆದಿನ ಬಲಿಪಾಡ್ಯಮಿಯಂದು ಭಕ್ತರ ದಂಡೇ ಬಂದಿತು.ಗುರುವಾರ ಅಹೋರಾತ್ರಿ ಅಪಾರ ಸಂಖ್ಯೆಯ ಭಕ್ತರಿಗೆ ದೇವಿ ದರ್ಶನ ಭಾಗ್ಯ ಕರುಣಿಸಿದಳು. ಉಚಿತ ಪ್ರವೇಶದ ಸಾಲು ಎರಡು ಕಿ.ಮೀ. ವರೆಗೂ ಕಂಡು ಬಂತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.