ಹಾಸನ: ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಮತ್ತು ಸೋಮವಾರ ಸಂಜೆ ಧಾರಾಕಾರ ಮಳೆ ಸುರಿದ ಆರ್ಭಟಿಸಿತು. ಸಂಜೆ ಆರು ಗಂಟೆಗೆ ಶುರುವಾದ ಮಳೆ ಸುಮಾರು ಒಂದು ತಾಸಿಗೂ ಅಧಿಕ ಸುರಿಯಿತು. ಎಡೆಬಿಡದೆ ಬೀಳುತ್ತಿರುವ ಮಳೆ ಜನಜೀವನ ಅಸ್ತವ್ಯಸ್ತಗೊಳಿಸಿದೆ.
ಮಳೆಯಿಂದಾಗಿ ಹಲವು ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ಹಾನಿಯಾಗಿದ್ದರೆ, ಕೆಲವು ಕಡೆ ಮನೆಗಳ
ಗೋಡೆಗಳು ಕುಸಿದು ಬಿದ್ದಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಸ್ತೆಯಲ್ಲಿ ನೀರುನಿಂತು ವಾಹನಸವಾರರು ಪರದಾಡುವಂತಾಯಿತು. ಸದ್ಯ ಜೋಳ ಕಟಾವು ನಡೆಯುತ್ತಿದ್ದು, ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರೈತರು ಹೈರಾಣಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.