ಹಾಸನ: ಹೇಮಾವತಿ ಜಲಾಶಯ ಬಹುತೇಕ ಭರ್ತಿ ಹಂತಕ್ಕೆ ಬಂದಿರುವುದರಿಂದ ಶುಕ್ರವಾರ ಸಂಜೆಯಿಂದಲೇ ನದಿಗೆ ನೀರು ಬಿಡಲಾಗುತ್ತಿದೆ.
ಆರು ಗೇಟ್ ತೆರೆದು ಸುಮಾರು 20 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಮೂರು ದಿನಗಳ ಅಂತರದಲ್ಲಿ 13 ಅಡಿ ನೀರು ಸಂಗ್ರಹವಾಗಿದೆ. ಹಾಸನ ಸೇರಿ ನಾಲ್ಕೈದು ಜಿಲ್ಲೆಗಳ ಭತ್ತದ ಬೆಳೆಗಾರರಿಗೆ ಅನುಕೂಲವಾಗುತ್ತದೆ. ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.