ADVERTISEMENT

ಹೆಜ್ಜೇನು ದಾಳಿ: 12 ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2021, 6:10 IST
Last Updated 4 ಫೆಬ್ರುವರಿ 2021, 6:10 IST
ಹೆಜ್ಜೇನು ದಾಳಿಯಿಂದ ಗಾಯಗೊಂಡಿರುವವರಿಗೆ ವನಗೂರು ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ಹೆಜ್ಜೇನು ದಾಳಿಯಿಂದ ಗಾಯಗೊಂಡಿರುವವರಿಗೆ ವನಗೂರು ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ   

ಹೆತ್ತೂರು: ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿ ಹೆಜ್ಜೇನು ದಾಳಿಗೆ 12 ಜನರು ಗಾಯಗೊಂಡ ಘಟನೆ ಬುಧವಾರ ನಡೆದಿದೆ.

ಗ್ರಾಮದ ತೋಟದ ಮಾಲೀಕ ಚಂದ್ರೇಗೌಡ, ಅಮೃತೇಶ್, ಕಾರ್ಮಿಕರಾದ ಮಂಜುಳಾ, ಗೀತಾ, ರಾಜೇಶ್, ರತ್ನ, ಕುಮಾರ, ಅಕ್ಕಮ್ಮ ಸೇರಿದಂತೆ ಹಲವರು ಜಮೀನಿನಲ್ಲಿ ಕಾಫಿ ಹಣ್ಣು ಕೊಯ್ಲು ಮಾಡುತ್ತಿದ್ದಾಗ ಏಕಾಏಕಿ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಗಾಯಗೊಂಡಿದ್ದಾರೆ.

ಇವರಲ್ಲಿ 6 ಜನರ ಸ್ಥಿತಿ ಸ್ವಲ್ಪ ಗಂಭೀರವಾಗಿದೆ ಎಂದು ವನಗೂರು ಸರ್ಕಾರಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಧುಸೂದನ್ ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.