ADVERTISEMENT

ಹಾಸನ: ಕೊರೊನಾ ವಾರಿಯರ್‌ಗಳಿಗೆ ಗೌರವ

ಸುರಕ್ಷತೆಯೊಂದಿಗೆ ಕನ್ನಡ ರಾಜ್ಯೋತ್ಸವ ಆಚರಣೆ: ಪೂರ್ವಭಾವಿ ಸಮಿತಿ ಸಭೆಯಲ್ಲಿ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2020, 15:26 IST
Last Updated 16 ಅಕ್ಟೋಬರ್ 2020, 15:26 IST
ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಮಿತಿ ಸಭೆಯಲ್ಲಿ ಹಾಸನ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಂ ಮಾತನಾಡಿದರು.
ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಮಿತಿ ಸಭೆಯಲ್ಲಿ ಹಾಸನ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಂ ಮಾತನಾಡಿದರು.   

ಹಾಸನ: ಕೋವಿಡ್‌-19 ಹಿನ್ನೆಲೆಯಲ್ಲಿ ಆರೋಗ್ಯ ಸುರಕ್ಷತಾ ಕ್ರಮದೊಂದಿಗೆ ಈ ವರ್ಷವೂ ಕನ್ನಡ ರಾಜ್ಯೋತ್ಸವವನ್ನು
ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಮಿತಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತ ರಾಜರಾಂ ಅವರು ಮಾತನಾಡಿ, ಕೋವಿಡ್ ಆತಂಕಗಳ ನಡುವೆ ಶಿಷ್ಟಾಚಾರಕ್ಕೆ ತೊಂದರೆ ಆಗದಂತೆ ರಾಜ್ಯೋತ್ಸವ ಆಚರಿಸಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಉಸ್ತುವಾರಿ ಸಚಿವರು ಧ್ವಜರೋಹಣ ನೆರವೇರಿಸಿ, ಸಂದೇಶ ನೀಡುವರು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದು, ಶಾಲಾ ಮಕ್ಕಳು ಭಾಗವಹಿಸುವಂತಿಲ್ಲ. ಸಾರ್ವಜನಿಕರು
ಇಚ್ಚಿಸಿದಲ್ಲಿ ಸ್ವಯಂ ಪ್ರೇರಣೆಯಿಂದ ಪಾಲ್ಗೊಳ್ಳಬಹುದು. ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಸಮಾರಂಭದಲ್ಲಿ
ಭಾಗವಹಿಸಬೇಕು ಎಂದು ಹೇಳಿದರು.

ADVERTISEMENT

ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಗುವುದು. ಕೋವಿಡ್ ವಾರಿಯರ್ಸ್‍ಗಳಿಗೂ ಗೌರವ ಸಲ್ಲಿಸಲಾಗುವುದು. ಇಲಾಖಾ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಲೋಪವಿಲ್ಲದಂತೆ ನಿರ್ವಹಿಸಬೇಕು. ಲೋಕೋಪಯೋಗಿ ಇಲಾಖೆ, ನಗರಸಭೆ ಇಲಾಖೆಗಳ ವತಿಯಿಂದ ವೇದಿಕೆ ನಿರ್ಮಾಣ ಮಾಡಬೇಕು ಎಂದರು.

ನ. 5 ರಿಂದ ಹಾಸನಾಂಬ ಜಾತ್ರಾ ಮಹೋತ್ಸವ ಇರುವುದರಿಂದ ಅ.31 ರಿಂದಲೇ ನಗರದ ಪ್ರಮುಖ ವೃತ್ತಗಳಲ್ಲಿ ನಗರಸಭೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದಿಂದ ದೀಪಾಲಂಕಾರ ಮಾಡಬೇಕು ಎಂದು ಹೇಳಿದರು.

ಉಪವಿಭಾಗಾಧಿಕಾರಿ ಬಿ.ಎ. ಜಗದೀಶ್, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಸಾಮಾಜಿಕ ಕಾರ್ಯಕರ್ತರ ಡಾ. ಗುರುರಾಜ್ ಹೆಬ್ಬಾರ್, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.