ಹಾಸನ: ತಾಲ್ಲೂಕಿನ ನಿಟ್ಟೂರು ಸಮೀಪದ ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಅಬಕಾರಿ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿ ನಾಗರಾಜ್ ಮತ್ತು ದಾವಣಗೆರೆಯ ಶೇಖರಪ್ಪ ಬಂಧಿತ ಆರೋಪಿಗಳು. ಜಮೀನು ಗುತ್ತಿಗೆ ಪಡೆದಿದ್ದ ಪ್ರಕಾಶ್ ಎಂಬಾತ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ.
ಅಬಕಾರಿ ಉಪ ಆಯುಕ್ತ ಗೋಪಾಲಕೃಷ್ಣಗೌಡ ನಿರ್ದೇಶನದ ಮೇರೆಗೆ ನಾಗೇನಹಳ್ಳಿ ಪ್ರಕಾಶ್ ಎಂಬುವರಿಗೆ ಸೇರಿದ ನಾಲ್ಕು ಎಕರೆಯಲ್ಲಿ ಕಬ್ಬಿನ ಮಧ್ಯೆ ಗಾಂಜಾ ಬೆಳೆದಿರುವುದನ್ನು ಅಬಕಾರಿ ಸಿಬ್ಬಂದಿ ಪತ್ತೆ ಮಾಡಿ, ಸುಮಾರು 60 ಕೆ.ಜಿ ಯಷ್ಟು ಗಾಂಜಾ ಸೊಪ್ಪು ವಶಪಡಿಸಿಕೊಂಡಿದ್ದಾರೆ.
‘ಸುಮಾರು 50 ಕೆ.ಜಿ. ಗಾಂಜಾ ಸೊಪ್ಪ ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಪ್ರಮುಖ ಆರೋಪಿ ತಲೆ ಮರೆಸಿಕೊಂಡಿದ್ದು, ಆತನ ಪತ್ತೆ ಮಾಡಲಾಗುವುದು’ ಎಂದು ಅಬಕಾರಿ ಉಪ ಆಯುಕ್ತ ಗೋಪಾಲಗೌಡ ತಿಳಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.