ಹಾಸನ: ಕ್ರಾಂತಿಕಾರಿ ಬಸವಣ್ಣನ ಪ್ರತಿಮೆ ಭಗ್ನಗೊಳಿಸಿರುವ ಕಿಡಿಗೇಡಿಗಳನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿ
ವೀರಶೈವ ಲಿಂಗಾಯಿತ ಯುವ ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು
ಪ್ರತಿಭಟನೆ ನಡೆಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಬಿಚಗುಪ್ಪಿ ಗ್ರಾಮದಲ್ಲಿ ಬಸವಣ್ಣವರ ಪ್ರತಿಮೆಯನ್ನು ನಾಲ್ಕು ದಿನಗಳ ಹಿಂದೆ
ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ. ಆಯುಧದಿಂದ ಹೊಡೆದು ಕೈ ಕತ್ತರಿಸಲಾಗಿದೆ. ಸಮಾಜ ಸುಧಾರಕ, ವಚನಕಾರ, ಜಾತಿ ಪದ್ಧತಿ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ ಮಾನವತಾವಾದಿಗೆ ಮಾಡಿರುವ ದೊಡ್ಡ ಅವಮಾನ ಇದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಸವಣ್ಣ 12ನೇ ಶತಮಾನ ಕಂಡ ಶ್ರೇಷ್ಠ ನಾಯಕ. ಇಂದಿಗೂ ಅವರ ವಚನಗಳು ಬದುಕಿಗೆ ದಾರಿ ದೀಪವಾಗಿದೆ. ಇಂತಹ ವ್ಯಕ್ತಿಗೆ ಅವಮಾನ ಮಾಡುವುದು ಖಂಡನೀಯ ಎಂದರು.
ವೀರಶೈವ ಲಿಂಗಾಯಿತ ಯುವ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಅವಿನಾಶ್, ಉಪಾಧ್ಯಕ್ಷ ಶರತ್ ಭೂಷಣ್, ಕಾರ್ಯದರ್ಶಿ ವೀರೇಶ್ ಕುಮಾರ್,, ಗೌರವಾಧ್ಯಕ್ಷ ಎಚ್,ಎನ್.ನಾಗೇಶ್, ಬಿ.ಎಚ್.ರೇಣುಕುಮಾರ್, ರಾಜು, ದಿಲೀಪ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.