ADVERTISEMENT

ಶ್ರವಣಬೆಳಗೊಳ: ಹಲ್ಲು ಕಟ್ಟಿಸಿಕೊಡುವಂತೆ ಜೆಡಿಎಸ್ ಕಾರ್ಯಕರ್ತನ ಮನವಿ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2021, 3:05 IST
Last Updated 31 ಮಾರ್ಚ್ 2021, 3:05 IST
ಎಚ್.ಡಿ.ಕುಮಾರಸ್ವಾಮಿ ಹೆಸರನ್ನು ಎದೆ ಮೇಲೆ ಹಚ್ಚೆ ಹಾಕಿಸಿಕೊಂಡಿರುವ ಜೆಡಿಎಸ್ ಕಾರ್ಯಕರ್ತ ಅಣ್ಣಪ್ಪ
ಎಚ್.ಡಿ.ಕುಮಾರಸ್ವಾಮಿ ಹೆಸರನ್ನು ಎದೆ ಮೇಲೆ ಹಚ್ಚೆ ಹಾಕಿಸಿಕೊಂಡಿರುವ ಜೆಡಿಎಸ್ ಕಾರ್ಯಕರ್ತ ಅಣ್ಣಪ್ಪ   

ಶ್ರವಣಬೆಳಗೊಳ: ಹೋಬಳಿಯ ಕೊತ್ತನಘಟ್ಟ ಗ್ರಾಮದ ಜೆಡಿಎಸ್ ಕಾರ್ಯಕರ್ತರೊಬ್ಬರು ‘ಹಲ್ಲು ಕಟ್ಟಿಸಿಕೊಡಿ’ ಎಂದು ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್.ಬಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಹೋಬಳಿಯ ಮಜ್ಜನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಮತ್ತು ಡೇರಿ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳಿದ್ದ ಶಾಸಕರಿಗೆ ಕೊತ್ತನಘಟ್ಟ ಗ್ರಾಮದ ಅಣ್ಣಪ್ಪ ಮನವಿ ನೀಡಿದ್ದಾರೆ.

‘ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಪಕ್ಷಕ್ಕಾಗಿ ಪ್ರಾಣವನ್ನೂ ಕೊಡಲು ತಯಾರಿದ್ದೇನೆ. ಕೆಲ ವರ್ಷಗಳ ಹಿಂದೆ ಬಸ್ಸಿನಲ್ಲಿ ಹೋಗುತ್ತಿದ್ದಾಗ ರಸ್ತೆಯಲ್ಲಿ ನೀವು (ಸಿ.ಎನ್.ಬಾಲಕೃಷ್ಣ) ನಿಂತಿದ್ದನ್ನು ನೋಡಿ, ನಿಮ್ಮನ್ನು ಭೇಟಿಯಾಗುವ ಆತುರದಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ನೆಗೆದು ರಸ್ತೆಗೆ ಬಿದ್ದಾಗ ಹಲ್ಲುಗಳನ್ನು ಕಳೆದುಕೊಂಡೆ. ಆದ್ದರಿಂದ ತಾವು ದಯಮಾಡಿ ನನಗೆ ಹಲ್ಲು ಕಟ್ಟಿಸಿಕೊಡಬೇಕಾಗಿ ಕೇಳಿಕೊಳ್ಳುತ್ತೇನೆ’ ಎಂದು ಮನವಿ ಪತ್ರದಲ್ಲಿ ವಿನಂತಿ
ಮಾಡಿಕೊಂಡಿದ್ದಾರೆ.

ADVERTISEMENT

ಇದ್ದಕ್ಕೆ ಸ್ಪಂದಿಸಿದ ಶಾಸಕ ಸಿ.ಎನ್.ಬಾಲಕೃಷ್ಣ, ಆದಷ್ಟು ಬೇಗ ಹಲ್ಲು ಕಟ್ಟಿಸಿಕೊಡುವ ಭರವಸೆ ನೀಡಿದ್ದು, ಕಾರ್ಯಕರ್ತ ಸಂತಸ ವ್ಯಕ್ತಪಡಿಸಿದ್ದಾರೆ.

ಅಣ್ಣಪ್ಪ ಜೆಡಿಎಸ್ ಅಭಿಮಾನಿಯಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರನ್ನು ಎದೆ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.