ಹೆತ್ತೂರು: ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರ್ಕಹಳ್ಳಿ ಗ್ರಾಮದಲ್ಲಿ ಆತಂಕ ಉಂಟು ಮಾಡಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಹಿಡಿದು, ಸುರಕ್ಷಿತವಾಗಿ ಬಿಸ್ಲೆ ರಕ್ಷಿತಾರಣ್ಯಕ್ಕೆ ಬಿಡಲಾಯಿತು.
ಕಳೆದ ಶುಕ್ರವಾರದಿಂದ ಈ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಗ್ರಾಮಸ್ಥರು, ಕಾಫಿ ತೋಟಕ್ಕೆ ಹೋಗುವ ಕೂಲಿ ಕಾರ್ಮಿಕರಿಗೆ ಆತಂಕ ಉಂಟಾಗಿತ್ತು. ಸೋಮವಾರ ಉರಗ ತಜ್ಞ ಚಂಗಡಿಹಳ್ಳಿ ರವಿ ಸಹಾಯದಿಂದ ಕಾಳಿಂಗ ಸರ್ಪವನ್ನು ಹಿಡಿಯಲಾಯಿತು.
‘ಪದೇ ಪದೇ ಮಲೆನಾಡು ವ್ಯಾಪ್ತಿಯಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗ ಸರ್ಪಗಳು ಭಯ ಉಂಟು ಮಾಡಿದ್ದು, ಈ ಹಾವುಗಳು ಎಲ್ಲಿಂದ ಬರುತ್ತಿವೆ? ಯಾರು ತಂದು ಬಿಡುತ್ತಿದ್ದಾರೆ ಎಂಬುದರ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮಸ್ಥರು ಅಗ್ರಹಿಸಿದ್ದಾರೆ.
ಬೆಳ್ಳಿಗೌಡ, ಅರಣ್ಯ ವೀಕ್ಷಕರಾದ ಕುಶಾಲ್, ರತನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.