ADVERTISEMENT

ಮಗನ ಉಳಿಸಿಕೊಡಿ ಎಂದು ಅಂಗಾಲಾಚಿದ್ದ ಶಾಸಕ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 13:22 IST
Last Updated 5 ಸೆಪ್ಟೆಂಬರ್ 2020, 13:22 IST
ಅರಸೀಕೆರೆ ತಾಲ್ಲೂಕು ಕಚೇರಿಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಕೆ.ಎಂ.ಶಿವಲಿಂಗೇಗೌಡ ಉದ್ಘಾಟಿಸಿದರು
ಅರಸೀಕೆರೆ ತಾಲ್ಲೂಕು ಕಚೇರಿಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಕೆ.ಎಂ.ಶಿವಲಿಂಗೇಗೌಡ ಉದ್ಘಾಟಿಸಿದರು   

ಅರಸೀಕೆರೆ (ಹಾಸನ): ‘ಈ ಹಿಂದೆ ವಿಧಾನಸಭೆಯಲ್ಲಿ ರಾಜ್ಯದ ಶಾಸಕರೊಬ್ಬರು ‘ನನ್ನ ಮಗ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾನೆ. ಆದರೆ, ಡ್ರಗ್ಸ್ ಮೋಹಕ್ಕೆ ಒಳಗಾಗಿ ಜೀವನವನ್ನೇ ನಾಶಪಡಿಸಿಕೊಳ್ಳುತ್ತಿದ್ದಾನೆ. ದಯಮಾಡಿ ಡ್ರಗ್ಸ್ ಮಾರಾಟ ಜಾಲವನ್ನು ಪತ್ತೆ ಹಚ್ಚಿ ಮಗನ ಜೀವ ಉಳಿಸಿಕೊಡಿ’ ಎಂದು ಅಂಗಲಾಚಿದ್ದರು’ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.

ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಅಂದಿನ ಸರ್ಕಾರ ಯಾವುದೇ ದಿಟ್ಟ ನಿರ್ಧಾರ ತೆಗೆದುಕೊಳ್ಳಲಿಲ್ಲ. ಈಗಲಾದರೂ ಸರ್ಕಾರ ಸೂಕ್ತ ಕ್ರಮ ಕೈಗೊಂಡು ಡ್ರಗ್ಸ್ ಜಾಲವನ್ನು ಮಟ್ಟ ಹಾಕಬೇಕು ಎಂದರು.

‘ಡ್ರಗ್ಸ್’ ಎಂಬ ನಶೆಯ ಮಾಯೆ ಬಹುಕಾಲದಿಂದ ವ್ಯಾಪಕವಾಗಿ ಹರಡಿ ಅಮಾಯಕ ಯುವಕರನ್ನು ತಪ್ಪು ದಾರಿಗೆ ಎಳೆಯುತ್ತಿದೆ. ಇದನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.