ADVERTISEMENT

ಮುಂದಿನ ಎರಡು ವರ್ಷಗಳಲ್ಲಿ ಆಪತ್ತಿದೆ: ಕೋಡಿಮಠದ ಸ್ವಾಮೀಜಿ ಭವಿಷ್ಯ

ಬೊಮ್ಮಾಯಿ ಅಧಿಕಾರ ಪೂರ್ಣಗೊಳಿಸುವರೇ ಎಂಬ ಪ್ರಶ್ನೆಗೂ ಸ್ವಾಮೀಜಿಗಳ ಉತ್ತರ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2021, 5:12 IST
Last Updated 31 ಆಗಸ್ಟ್ 2021, 5:12 IST
   

ಸೊರಬ: ಮುಂದಿನ ಎರಡು ವರ್ಷಗಳಲ್ಲಿ ಜಲಪ್ರಳಯ ಸಂಭವಿಸಿಲಿದೆ ಎಂದು ಕೋಡಿ ಮಠದ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.

ಸೋಮವಾರ ತಾಲ್ಲೂಕಿನ ಜಡೆ ಸಂಸ್ಥಾನ ಮಠದ ಜಗದ್ಗುರು ಕುಮಾರ ಕೆಂಪಿನ ಸಿದ್ಧವೃಷಭೇಂದ್ರ ಸ್ವಾಮೀಜಿ ಕರ್ತೃ ಗದ್ದುಗೆಗೆ ಭೇಟಿ ನೀಡಿ, ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಜಗತ್ತಿನಲ್ಲಿ ಒಂದು ದೇಶ ಭೂಪಟದಿಂದ ಅಳಿಸಿಹೋಗಲಿದೆ ಎಂದು 2 ವರ್ಷಗಳ ಹಿಂದೆ ಭವಿಷ್ಯ ನುಡಿದಿದ್ದೆ. ಅದರಂತೆ ಇಂದು ಅಫ್ಗಾನಿಸ್ತಾನ ತಾಲಿಬಾನ್ ವಶವಾಗುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಜಲಪ್ರಳಯ ಉಂಟಾಗಲಿದ್ದು, ಭೂಕುಸಿತ, ಗುಡ್ಡ ಕುಸಿತದಿಂದ ಸಾವು, ನೋವು ಸಂಭವಿಸಲಿವೆ. ಮಕ್ಕಳ ಶಿಕ್ಷಣ ಇನ್ನೂ 2 ವರ್ಷ ಹೊಯ್ದಾಟದಲ್ಲಿರಲಿದೆ’ ಎಂದುಕೋಡಿ ಮಠದ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

ADVERTISEMENT

ಬೊಮ್ಮಾಯಿ ಅಧಿಕಾರ ಪೂರ್ಣಗೊಳಿಸುವರೇ?

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಳಿದ ಅವಧಿಯನ್ನು ಪೂರ್ಣಗೊಳಿಸಲಿದ್ದಾರೆಯೇ’ ಎನ್ನುವ ಪ್ರಶ್ನೆಗೆ, ‘ಅಧಿಕಾರದ ಅನುಭವವನ್ನು ಅವರ ತಂದೆ ಕಾಲದಿಂದಲೂ ಹೊಂದಿದ್ದಾರೆ. ಎಲ್ಲರನ್ನೂ ವಿಶ್ವಾಸದಿಂದ ನೋಡುವ ಗುಣ ಇರುವುದರಿಂದ ಅವಧಿ ಪೂರ್ಣಗೊಳಿಸುವ ಜೊತೆಗೆ ಸುಭದ್ರ ಆಡಳಿತ ನಡೆಸಲಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.