ADVERTISEMENT

ಕೆಎಸ್‌ಆರ್‌ಟಿಸಿ ಬಸ್‌-ಕಾರು ಅಪಘಾತ; ಸ್ಥಳದಲ್ಲೇ ವ್ಯಕ್ತಿ ಸಾವು, ನಾಲ್ವರು ಗಂಭೀರ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 16:56 IST
Last Updated 9 ಸೆಪ್ಟೆಂಬರ್ 2020, 16:56 IST
ಬೇಲೂರು ತಾಲ್ಲೂಕಿನ ರಾಯಾಪುರ ಸಮೀಪ ಕೆಎಸ್‍ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಬವಿಸಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ.
ಬೇಲೂರು ತಾಲ್ಲೂಕಿನ ರಾಯಾಪುರ ಸಮೀಪ ಕೆಎಸ್‍ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಬವಿಸಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ.   

ಬೇಲೂರು: ರಾಯಾಪುರ ಗ್ರಾಮದ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಬಂಟೇನಹಳ್ಳಿಯ ಶಿಯಾನ್ ಪಾಷಾ (19) ಮೃತಪಟ್ಟು, ನಾಲ್ವರುಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನಲ್ಲಿ ವೆಲ್ಡಿಂಗ್ ಕೆಲಸಮಾಡುತ್ತಿದ್ದ ಶಿಯಾನ್ ಪಾಷಾ, ಬುಧವಾರ ರಾತ್ರಿ ಬರುತ್ತೇನೆಂದು ಕರೆ ಮಾಡಿ ಮನೆಗೆ ತಿಳಿಸಿದ್ದರು. ಮಂಗಳವಾರ ರಾತ್ರಿಯೇ ಬಂಟೇನಹಳ್ಳಿ ಗ್ರಾಮದ ಮನೆಗೆ ಬಂದಿದ್ದು, ಬುಧವಾರ ತನ್ನ ಸ್ನೇಹಿತರೊಂದಿಗೆ ತಾಲ್ಲೂಕಿನ ರಾಯಾಪುರ ಸಮೀಪ ಕಾರಿನಲ್ಲಿ ಹಾಸನ ರಸ್ತೆಯಲ್ಲಿ ತೆರಳುತಿದ್ದ ಸಂದರ್ಭ ಎದುರಿನಿಂದ ಬರುತ್ತಿದ್ದ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಶಿಯಾನ್ ಪಾಷಾ ಸ್ಥಳದಲ್ಲೇ ಮೃತಪಟ್ಟರು. ಕಾರಿನಲ್ಲಿದ್ದ ಮುಸ್ತಿಯಾರ್, ಸಯ್ಯದ್ ತಬರಕ್, ಅಮಾನ್ ಹಾಗೂ ಮುಬಾರಕ್ ಗಂಭೀರ ಗಾಯಗೊಂಡಿದ್ದಾರೆ. ಅವರಿಗೆ ಬೇಲೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.