ಹಾಸನ: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಖ್ಯಮಂತ್ರಿ ನಿವಾಸಕ್ಕೆ ಸಾರಿಗೆ ನೌಕರರೊಬ್ಬರು ಪಾದಯಾತ್ರೆ ಆರಂಭಿಸಿದ್ದಾರೆ.
ಅರಕಲಗೂಡು ಡಿಪೊದಲ್ಲಿ ಚಾಲಕ ಹಾಗೂ ನಿರ್ವಾಹಕರಾಗಿರುವ ಪ್ರದೀಪ್, ತಮ್ಮ ಗ್ರಾಮ ಚನ್ನರಾಯಪಟ್ಟಣದಿಂದ ಪಾದಯಾತ್ರೆ ಹೊರಟಿದ್ದಾರೆ.
'ಎಲ್ಲ ನೌಕರರ ಪರವಾಗಿ ಪಾದಯಾತ್ರೆ ಮಾಡುತ್ತಿದ್ದೇನೆ. ಸಾರಿಗೆ ನೌಕರರ ಬೇಡಿಕೆಯನ್ನು ಮುಖ್ಯಮಂತ್ರಿ ಕೂಡಲೇ ಈಡೇರಿಸಬೇಕು' ಎಂದು ಪ್ರದೀಪ್ ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.