ADVERTISEMENT

ಹಾಸನ | ದೊಡ್ಡತಪ್ಪಲೆ ಬಳಿ ನಿಲ್ಲದ ಭೂಕುಸಿತ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2024, 14:02 IST
Last Updated 1 ಆಗಸ್ಟ್ 2024, 14:02 IST
ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲೆ ಬಳಿ ಗುರುವಾರ ಬೆಳಿಗ್ಗೆ ಮತ್ತೆ ಭೂಕುಸಿತವಾಗಿದ್ದು, ರಸ್ತೆಯ ಮೇಲೆ ಮಣ್ಣು ಬಿದ್ದಿತ್ತು.
ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲೆ ಬಳಿ ಗುರುವಾರ ಬೆಳಿಗ್ಗೆ ಮತ್ತೆ ಭೂಕುಸಿತವಾಗಿದ್ದು, ರಸ್ತೆಯ ಮೇಲೆ ಮಣ್ಣು ಬಿದ್ದಿತ್ತು.   

ಹಾಸನ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ –75 ರಲ್ಲಿ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲೆ ಬಳಿ ಗುರುವಾರ ಬೆಳಿಗ್ಗೆ ವಾಹನ ಸಂಚಾರ ಆರಂಭಿಸಿದ ಒಂದು ಗಂಟೆಯಲ್ಲಿಯೇ ಮತ್ತೆ ರಸ್ತೆಗೆ ಮಣ್ಣು ಕುಸಿಯಿತು. ಯಾವುದೇ ಅನಾಹುತ ಸಂಭವಿಸಿಲ್ಲ. ಮತ್ತೆ ಮಣ್ಣು ತೆರವುಗೊಳಿಸಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ‘ಗಣಿ ಮತ್ತು ಭೂವಿಜ್ಞಾನ ಇಲಾಖೆ ತಜ್ಞರ ನಿರ್ದೇಶನದಂತೆ ಭೂಕುಸಿತವನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು’ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT