ADVERTISEMENT

₹ 25 ಸಾವಿರ ಮೌಲ್ಯದ ಗಾಂಜಾ ಗಿಡ ವಶ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2020, 7:37 IST
Last Updated 15 ಸೆಪ್ಟೆಂಬರ್ 2020, 7:37 IST

ಚನ್ನರಾಯಪಟ್ಟಣ: ಶ್ರವಣಬೆಳಗೊಳ ಹೋಬಳಿ ಕುಂಬೇನಹಳ್ಳಿಯ ಜಮೀನಿನಲ್ಲಿ ಬೆಳೆದಿದ್ದ ₹ 25 ಸಾವಿರ ಮೌಲ್ಯದ 1.170 ಕೆ.ಜಿ ಗಾಂಜಾ ಗಿಡವನ್ನು ಸೋಮವಾರ ವಶ ಪಡಿಸಿಕೊಳ್ಳಲಾಗಿದೆ.

ಸುಮಿತ್ರಾ ಮತ್ತು ಅವರ ಪುತ್ರ ನವೀನ ಎಂಬುವರ ಜಮೀನಿನಲ್ಲಿ ಗಾಂಜಾ ಗಿಡ ಬೆಳೆಯಲಾಗಿತ್ತು. ಆರೋಪಿ ಸುಮಿತ್ರಾ

ಅವರನ್ನು ಬಂಧಿಸಲಾಗಿದ್ದು, ನವೀನ ತಲೆ ಮರೆಸಿಕೊಂಡಿದ್ದಾನೆ. ಖಚಿತ ಮಾಹಿತಿ ಮೇರೆಗೆ ಸಿಪಿಐ ಬಿ.ಜಿ.ಕುಮಾರ್, ಪಿಎಸ್‌ಐ ಶ್ರೀನಿವಾಸ್, ಹೇಮಾವತಿ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಉಮೇಶ್ ಮತ್ತು ಎಎಸ್‌ಐ ಉಮೇಶ್, ಸಿಬ್ಬಂದಿ ಮಹೇಶ್, ರಾಮಕೃಷ್ಣ, ವಾಣಿ, ಪ್ರದೀಪಕುಮಾರ್, ಲೋಕೇಶ್, ಶಿವಕುಮಾರ್, ಅನಿಲ್ ಕುಮಾರ್ ದಾಳಿಯಲ್ಲಿ ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.