ಚನ್ನರಾಯಪಟ್ಟಣ: ತಾಲ್ಲೂಕಿನ ಹಿರೀಸಾವೆ ಹೋಬಳಿ ದಿಡಗ ತುಮಕೂರು ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಅಂದಾಜು ₹ 60 ಸಾವಿರ ಮೌಲ್ಯದ 4.5 ಕೆ.ಜಿ.ಗಾಂಜಾ ಗಿಡಗಳನ್ನು ಶುಕ್ರವಾರ ವಶ ಪಡಿಸಿಕೊಳ್ಳಲಾಗಿದೆ.
ಗ್ರಾಮದ ನಾಗರಾಜು ಎಂಬುವರ ಜಮೀನಿನಲ್ಲಿ ರಾಗಿ ಮತ್ತು ಮುಸುಕಿನ ಜೋಳ ಬೆಳೆಯ ಮಧ್ಯೆ ಅಲ್ಲಲ್ಲಿ ಗಾಂಜಾ ಬೆಳೆಯಲಾಗಿತ್ತು. ಆರೋಪಿ ನಾಗರಾಜು ತಲೆ ಮರೆಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪನಿರೀಕ್ಷಕ ಎಂ.ಎಚ್.ರಘು, ವಲಯ ಅಬಕಾರಿ ನಿರೀಕ್ಷಕಿ ಎಂ.ಜೆ.ಅನಿತಾ, ಉಪನಿರೀಕ್ಷಕ ಎಚ್.ಎ.ಅಬ್ದುಲ್ ನಿಸಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.