ADVERTISEMENT

ಸಮ್ಮೇಳನಾಧ್ಯಕ್ಷರಿಂದ ಬಾಹುಬಲಿಗೆ ಮಹಾಮಸ್ತಕಾಭಿಷೇಕ

​ಪ್ರಜಾವಾಣಿ ವಾರ್ತೆ
Published 25 ಜೂನ್ 2018, 16:10 IST
Last Updated 25 ಜೂನ್ 2018, 16:10 IST
ಸಮ್ಮೇಳನಾಧ್ಯಕ್ಷ ಷ.ಶೆಟ್ಟರ್ ಭಾನುವಾರ ಶ್ರವಣಬೆಳಗೊಳದ ವಿಂಧ್ಯಗಿರಿಯಲ್ಲಿ ಬಾಹುಬಲಿಗೆ  ಮಹಾಮಸ್ತಕಾಭಿಷೇಕ ನೆರವೇರಿಸಿದರು. ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇದ್ದರು
ಸಮ್ಮೇಳನಾಧ್ಯಕ್ಷ ಷ.ಶೆಟ್ಟರ್ ಭಾನುವಾರ ಶ್ರವಣಬೆಳಗೊಳದ ವಿಂಧ್ಯಗಿರಿಯಲ್ಲಿ ಬಾಹುಬಲಿಗೆ  ಮಹಾಮಸ್ತಕಾಭಿಷೇಕ ನೆರವೇರಿಸಿದರು. ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇದ್ದರು   

ಶ್ರವಣಬೆಳಗೊಳ: ಅಖಿಲ ಭಾರತ ಪ್ರಥಮ ಹಳಗನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ.ಷ.ಶೆಟ್ಟರ್ ಭಾನುವಾರ ವಿಂಧ್ಯಗಿರಿಯಲ್ಲಿ ಭಾನುವಾರ ಬಾಹುಬಲಿಗೆ ಮಹಾಮಸ್ತಕಾಭಿಷೇಕ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕ್ಷೇತ್ರದ ಪೀಠಾಧಿಪತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು, ‘ಷ.ಶೆಟ್ಟರ್‌ ಶ್ರವಣಬೆಳಗೊಳದ ಪರಂಪರೆಯ ಬಗ್ಗೆ ಆಂಗ್ಲಭಾಷೆಯಲ್ಲಿ ಬರೆದು ಜಗತ್ತಿಗೆ ಪರಿಚಯಿಸಿದರು. ಇಲ್ಲಿಯ ಮಹಾದ್ವಾರವನ್ನು ಅವರೇ ವಿನ್ಯಾಸಗೊಳಿಸಿದ್ದಾರೆ’ ಎಂದು ಹೇಳಿದರು.

ಷ.ಶೆಟ್ಟರ್‌ ಅವರು ಮಾತನಾಡಿ, ‘ನನಗೆ ಇದು ಸ್ಮರಣಾರ್ಹ ಘಟನೆ’ ಎಂದರು. ಸಮ್ಮೇಳನಕ್ಕೆ ಆಗಮಿಸಿದ ಸಾಹಿತಿಗಳಿಗಾಗಿ ವಿಶೇಷ ಮಸ್ತಕಾಭಿಷೇಕ ಕಾರ್ಯಕ್ರಮವನ್ನು ಕ್ಷೇತ್ರ ಆಯೋಜಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.