ADVERTISEMENT

ಹಳೇಬೀಡಿನ ದೊಡ್ಡಗದ್ದವಳ್ಳಿಯಲ್ಲಿ ಹೊಯ್ಸಳರ ಕಾಲದ ಮಹಾಕಾಳಿ ವಿಗ್ರಹ ಭಗ್ನ

ಹಳೇಬೀಡು ಸಮೀಪದ ದೊಡ್ಡಗದ್ದವಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ಘಟನೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2020, 2:57 IST
Last Updated 21 ನವೆಂಬರ್ 2020, 2:57 IST
ಹಳೇಬೀಡು ಸಮೀಪದ ದೊಡ್ಡಗದ್ದವಳ್ಳಿ ಮಹಾಲಕ್ಷ್ಮೀ ದೇವಾಲಯದ ಮಹಾಕಾಳಿ ವಿಗ್ರಹ ತುಂಡಾಗಿರುವುದು
ಹಳೇಬೀಡು ಸಮೀಪದ ದೊಡ್ಡಗದ್ದವಳ್ಳಿ ಮಹಾಲಕ್ಷ್ಮೀ ದೇವಾಲಯದ ಮಹಾಕಾಳಿ ವಿಗ್ರಹ ತುಂಡಾಗಿರುವುದು   

ಹಳೇಬೀಡು: ಸಮೀಪದ ದೊಡ್ಡಗದ್ದವಳ್ಳಿಯಲ್ಲಿನ, ಹೊಯ್ಸಳರ ಕಾಲದ ಮಹಾಲಕ್ಷ್ಮೀ ದೇವಾಲಯದ ಮಹಾಕಾಳಿ ವಿಗ್ರಹ ಎರಡು ತುಂಡಾಗಿದ್ದು, ಘಟನೆಯು ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ನಿಧಿ ಆಸೆಗಾಗಿ ದೇವಾಲಯಕ್ಕೆ ನುಗ್ಗಿದ ಕಿಡಿಗೇಡಿಗಳು, ವಿಗ್ರಹವನ್ನು ಪೀಠದಿಂದ ಮೇಲೆತ್ತುವ ಸಂದರ್ಭದಲ್ಲಿ ಮೂರ್ತಿಗೆ ಹಾನಿ ಆಗಿರಬಹುದು ಎಂದು ಶಂಕಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

ಪ್ರತಿನಿತ್ಯ ಅರ್ಚಕರು ಪೂಜೆ ನೆರವೇರಿಸಿ ಮನೆಗೆ ಹೋಗುತ್ತಾರೆ. ನಂತರ ಕೇಂದ್ರ ಪುರಾತತ್ವಸರ್ವೇಕ್ಷಣಾ ಇಲಾಖೆಯವರುದೇವಾಲಯದ ರಕ್ಷಣೆ ನೋಡಿಕೊಳ್ಳುತ್ತಾರೆ. ಆದರೆ ರಾತ್ರಿ ವೇಳೆ ಕಾವಲುಗಾರರನ್ನು ನೇಮಕ ಮಾಡದೇ ಇರುವುದು ಘಟನೆಗೆ ಕಾರಣ ಎನ್ನಲಾಗಿದೆ.

‘ರಜೆ ಹಾಕಿ ಊರಿಗೆ ಹೋದ ಸಮಯದಲ್ಲಿ ಘಟನೆ ನಡೆದಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಹಾಗೂ ಇಲಾಖೆಯಿಂದ ಈ ಕುರಿತು ತನಿಖೆ ನಡೆಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಸಹಾಯಕ ಸ್ಮಾರಕ ಸಂರಕ್ಷಣಾಧಿಕಾರಿ ಕಿಶೋರ್ ರೆಡ್ಡಿ ‘‍ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.