ಹಾಸನ: ‘ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್.ಎಂ. ವಿಶ್ವನಾಥ್ ಪರವಾಗಿ ನ. 29 ರಿಂದ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರಕಾರ್ಯ ಆರಂಭಿಸಲಾಗು ವುದು’ ಎಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
‘ಕೇಂದ್ರ ಹಾಗೂ ರಾಜ್ಯ ಸರ್ಕಾ ರದಸಾಧನೆಗಳನ್ನು ಮುಂದಿಟ್ಟು ಮತಯಾ ಚನೆ ಮಾಡಲಾಗುವುದು. ಚುನಾವಣೆ ಯಲ್ಲಿ ಗೆಲ್ಲಲೇಬೇಕುಎಂಬ ಆತ್ಮವಿಶ್ವಾಸ ದಿಂದ ಕೆಲಸ ಮಾಡುತ್ತೇವೆ. ಈಗಾಗಲೇ ವಿಧಾನಸಭಾ ಕ್ಷೇತ್ರದಲ್ಲಿ ನಿರ್ವಹಣಾ ಸಮಿತಿ ರಚಿಸಲಾಗಿದೆ. ಜಿಲ್ಲಾ ಪಂಚಾಯಿತಿಕ್ಷೇತ್ರ ಮಟ್ಟದಲ್ಲೂ ತಂಡಗ ಳನ್ನು ರಚಿಸಲಾಗಿದೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಈ ಬಾರಿಯ ವಿಧಾನ ಪರಿಷತ್ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲೆಯಲ್ಲಿಒಟ್ಟು 3,617 ಮತದಾರರಿದ್ದಾರೆ. ಈ ಪೈಕಿ ಬಿಜೆಪಿ ಬೆಂಬಲಿತ 1,270 ಮಂದಿ ಗ್ರಾಮ ಪಂಚಾಯಿತಿಸದಸ್ಯರು, 34 ಜನ ಪುರಸಭೆ ಹಾಗೂ ನಗರಸಭೆ ಸದಸ್ಯರಿದ್ದಾರೆ. ಪ್ರತಿಯೊಬ್ಬ ಸದಸ್ಯ ರನ್ನುಸಂಪರ್ಕಿಸಿ ಮತಯಾಚನೆ ಮಾಡಲಾಗುವುದು’ ಎಂದರು.
‘ಬಿ.ಎಸ್. ಯಡಿಯೂರಪ್ಪ ಅವರುಜೆಡಿಎಸ್ ಬೆಂಬಲ ಕೋರಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಎಲ್ಲಿ ಜೆಡಿಎಸ್ ಅಭ್ಯರ್ಥಿಗಳಿಲ್ಲ ಅಲ್ಲಿ ಬಿಜೆಪಿಗೆ ಸಹಕಾರ ನೀಡುವಂತೆ ಕೋರಿದ್ದಾರೆ. ಪಕ್ಷದ ಅಭ್ಯರ್ಥಿಗಳಿರುವ ಕಡೆ ನಾವು ಸಹಕಾರ ನೀಡುವುದಿಲ್ಲ. ಚುನಾವಣೆಯನ್ನು ಚುನಾವಣೆ ರೀತಿ ನಡೆಸುತ್ತೇವೆ’ ಎಂದರು.
‘ಹಾಸನದಲ್ಲಿ ಉದ್ಯಮಿಗಳು ಹೆಚ್ಚಿದ್ದಾರೆ. ನಗರದ ವರ್ತುಲ ರಸ್ತೆಯಲ್ಲಿ ಕಾನೂನು ಬದ್ದವಾಗಿಯೇ ಸಿ.ಎಲ್– 7 ಬಾರ್ ತೆರೆಯಲು ಅವಕಾಶ ನೀಡ ಲಾಗಿದೆ. ಕಾನೂನು ಮೀರಿ ಬಾರ್ ತೆರೆದಿದ್ದರೆಅಂತವರ ಬಗ್ಗೆ ಮಾಹಿತಿ ನೀಡಿದರೆ ಕಾನೂನು ಕ್ರಮ ಕೈಗೊಳ್ಳ ಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ಪರ್ಸೆಂಟೇಜ್ ಎಂಬುದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹುಟ್ಟಿಕೊಂಡಿದೆ. ಇದರಲ್ಲಿ ಬಿಜೆಪಿಭಾಗವಹಿಸಿಲ್ಲ. ರಾಜ್ಯದಲ್ಲಿ ತನಿಖಾ ಸಂಸ್ಥೆಗಳು ಸದೃಢವಾಗಿವೆ. ಅಗತ್ಯಬಿದ್ದರೆ ಮಾತ್ರ ಸಿಬಿಐತನಿಖೆಗೆ ವಹಿಸಲು ಸಿ.ಎಂ ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್.ಎಂ. ವಿಶ್ವನಾಥ್, ಶಾಸಕ ಪ್ರೀತಂ ಜೆ. ಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ. ಸುರೇಶ್, ಮಾಜಿ ಅಧ್ಯಕ್ಷ ರೇಣುಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.