ಹಾಸನ: ‘ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಿ ಮತ್ತೆ 303 ಸಂಸದರು ಆಯ್ಕೆಯಾದರೆ ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಯಲ್ಲಿ ಕೆಲಸ ಮಾಡಿಕೊಂಡು ಇರುತ್ತೇನೆ’ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಇವಿಎಂ ಇಲ್ಲದೆ ಮತ್ತೆ ಚುನಾವಣೆ ನಡೆಸಿ ಗೆದ್ದರೆ ಯಾವತ್ತೂ ಮೋದಿಯನ್ನು ಟೀಕಿಸುವುದಿಲ್ಲ. ದೇಶದಲ್ಲಿ ನಿರುದ್ಯೋಗ, ಬಡತನ, ಆರ್ಥಿಕ ಹಿಂಜರಿತಗಳನ್ನು ಮರೆಮಾಚುವ ಸಲುವಾಗಿ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಜಾರಿಗೊಳಿಸಿದ್ದಾರೆ. ಪ್ರಪಂಚದ ಯಾವುದೇ ರಾಷ್ಟ್ರದಲ್ಲೂ ಕೂಡ ಜಾತಿ ಆಧಾರದ ಮೇಲೆ ಪೌರತ್ವ ಕಾಯ್ದೆ ಜಾರಿಗೆ ತಂದಿಲ್ಲ’ ಎಂದರು
‘ಪ್ರಧಾನಿ ನರೇಂದ್ರ ಮೋದಿ ಒಬ್ಬ ಆಧುನಿಕ ಭಸ್ಮಾಸುರ, ಯಾವುದಕ್ಕೆ ಕೈ ಹಾಕಿದರು ಅದು ಭಸ್ಮವಾಗುತ್ತದೆ. ಬಿಜೆಪಿ ಕೂಡ ಕುಟುಂಬ ರಾಜಕೀಯ ಮಾಡುತ್ತಿದೆ. ಯಡಿಯೂರಪ್ಪ ತಮ್ಮ ಮಗನನ್ನು ಸಂಸದನಾಗಿ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕರು ತಮ್ಮ ಕುಟುಂಬದ ಸದಸ್ಯರನ್ನು ಶಾಸಕರನ್ನು ಮಾಡಿಕೊಳ್ಳುವ ಮೂಲಕ ಕುಟುಂಬ ರಾಜಕೀಯ ಮಾಡುತ್ತಿದೆ’ ಎಂದು ಹೇಳಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.