ADVERTISEMENT

ಮೋದಿ ಎನ್ನುವವರಿಗೆ ದವಡೆಗೆ ಹೊಡಿರಿ

ಶಾಸಕ ಶಿವಲಿಂಗೇಗೌಡ ಹೇಳಿಕೆ ವೈರಲ್‌

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2019, 13:38 IST
Last Updated 24 ಮಾರ್ಚ್ 2019, 13:38 IST
   

ಹಾಸನ: ‘ಮೋದಿ, ಮೋದಿ.. ಎಂದು ಬರುವವರ ದವಡೆಗೆ ಹೊಡಿರಿ..’

–ಇದು ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ‌ ಶಿವಲಿಂಗೇಗೌಡ ಅವರು ಚುನಾವಣಾ ಪ್ರಚಾರ ಸಭೆಯಲ್ಲಿ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

‘ಮೋದಿ ಅಧಿಕಾರಕ್ಕೆ ಬರುವ ಮುನ್ನ ಸ್ವಿಸ್‌ ಬ್ಯಾಂಕ್‌ನಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ ಹಣ ಹಾಕುತ್ತೇವೆ ಎಂದಿದ್ದರು. ಯಾರಾದದರೂ ಖಾತೆಗೆ ₹ 15 ಬಂದಿದೆಯೇ’ ಎಂದು ಶಾಸಕರು ಪ್ರಶ್ನಿಸಿದ್ದಾರೆ.

ADVERTISEMENT

‘ಬಿಜೆಪಿಯವರು ಬಂದಾಗ ಕೇಳಬೇಕು. ಎಲ್ಲಯ್ಯಾ ದುಡ್ಡು, ಮೋದಿ ಯಾರ ಖಾತೆಗೆ ಹಣ ಹಾಕಿದ್ದಾರೆ’ ಎಂದು ಪ್ರಶ್ನಿಸುವಂತೆ ಕಾರ್ಯಕರ್ತರಿಗೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.