ADVERTISEMENT

ಹಾಸನ: ರಸ್ತೆಯಲ್ಲಿ ಯುವಕನ ಬೆತ್ತಲೆ ಮೆರವಣಿಗೆ

ವಿದ್ಯಾರ್ಥಿನಿಯ ಕೈ ಹಿಡಿದು ಎಳೆದಾಡಿದ ಆರೋಪ

​ಪ್ರಜಾವಾಣಿ ವಾರ್ತೆ
Published 11 ಜನವರಿ 2022, 15:48 IST
Last Updated 11 ಜನವರಿ 2022, 15:48 IST
   

ಹಾಸನ: ನಗರದ ಮಹಾರಾಜ ಉದ್ಯಾನದಲ್ಲಿ ಕುಡಿದ ಮತ್ತಿನಲ್ಲಿ ಕಾಲೇಜು ಹುಡುಗಿಯ ಕೈ ಹಿಡಿದು ಎಳೆದಾಡಿದ ಎಂಬ ಆರೋಪದ ಕಾರಣಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿ, ಬೆತ್ತಲೆಮೆರವಣಿಗೆ ಮಾಡಲಾಗಿದೆ.

ಮಂಗಳವಾರ ಸಂಜೆ ಉದ್ಯಾನದಲ್ಲಿ ವಿದ್ಯಾರ್ಥಿನಿ ಕುಳಿತಿದ್ದಾಗ ವಿಜಯಪುರದ ಕೂಲಿ ಕಾರ್ಮಿಕ ಕೈ ಹಿಡಿದು ಎಳೆದಾಡಿದ್ದಾನೆ ಎಂದು ಆರೋಪಿಸಿ ಕರ್ನಾಟಕ ಪ್ರಜಾಶಕ್ತಿ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಪ್ರವೀಣ್‌ ಗೌಡ ಸೇರಿದಂತೆ ಯುವಕರ ಗುಂಪು ಆತನನ್ನು ಥಳಿಸಿತು. ನಂತರ ವಿವಸ್ತ್ರಗೊಳಿಸಿ, ನಡುರಸ್ತೆಯಲ್ಲಿಯೇ ನಡೆಸಿಕೊಂಡು ಪೊಲೀಸ್‌ ಠಾಣೆಗೆ ಕರೆದೊಯ್ಯುತ್ತಿದ್ದರು.

ಅದನ್ನು ಸಾರ್ವಜನಿಕರು ಆಕ್ಷೇಪಿಸಿ, ಬಟ್ಟೆ ನೀಡುವಂತೆ ಹೇಳಿದರೂಯುವಕರ ಗುಂಪು ಕೇಳಲಿಲ್ಲ.ಅಷ್ಟರಲ್ಲಿ ಬಂದ ಪೊಲೀಸರು ಯುವಕನನ್ನು ವಶಕ್ಕೆ ಪಡೆದು, ಜೀಪಿನಲ್ಲಿ ಠಾಣೆಗೆ ಕರೆದೊಯ್ದರು.‘ವಿಚಾರಣೆ ನಡೆದಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.