ADVERTISEMENT

ಸಕಲೇಶಪುರ| ನದಿಗೆ ಹಾರಿ ನವವಿವಾಹಿತೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2021, 3:58 IST
Last Updated 6 ಆಗಸ್ಟ್ 2021, 3:58 IST
ಪೂಜಾ
ಪೂಜಾ    

ಸಕಲೇಶಪುರ: ಚನ್ನರಾಯಪಟ್ಟಣ ತಾಲ್ಲೂಕಿನ ನವ ವಿವಾಹಿತೆ ಪೂಜಾ (22) ಗುರುವಾರ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರು.

ಮಳಲಿ ಗ್ರಾಮದ ಅಶ್ವತ್ಥ್ ಅವರೊಂದಿಗೆ ಫೆಬ್ರುವರಿಯಲ್ಲಿ ಪ್ರೇಮ ವಿವಾಹವಾಗಿತ್ತು. ನಂತರ ದಂಪತಿ ಕುಟುಂಬದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಮಹಿಳೆಗೆ ಹಿಂದೆಯೇ ಬೇರೊಬ್ಬರೊಂದಿಗೆ ನಿಶ್ಚಿತಾರ್ಥವಾಗಿತ್ತು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT