ADVERTISEMENT

ಕಾಂಗ್ರೆಸ್‌ ಅಧ್ಯಕ್ಷರ ನೇಮಕಕ್ಕೆ ಆಕ್ಷೇಪ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 8:21 IST
Last Updated 7 ಡಿಸೆಂಬರ್ 2022, 8:21 IST
   

ಹಾಸನ: ಕಾಂಗ್ರೆಸ್‌ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಈ.ಎಚ್‌. ಲಕ್ಷ್ಮಣ್ ನೇಮಕವನ್ನು ವಿರೋಧಿಸಿ ಕಾಂಗ್ರೆಸ್‌ ಕಾರ್ಯಕರ್ತರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಎಂಟು ತಿಂಗಳ ಹಿಂದೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರಿದ್ದ ಲಕ್ಷ್ಮಣ್ ಅವರನ್ನು ನೇಮಕ ಮಾಡಿರುವುದು ಸರಿಯಲ್ಲ. ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸಿ, ವಲಸೆ ಬಂದವರಿಗೆ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಹೈಕಮಾಂಡ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷರನ್ನು ಕೂಡಲೇ ಬದಲಾವಣೆ ಮಾಡಬೇಕು. ಪಕ್ಷ ಸಂಘಟನೆಗೆ ದುಡಿದವರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಧ್ರವನಾರಾಯಣ್, ದೂರವಾಣಿ ಕರೆ ಮೂಲಕ ‘ಕೆಲ ದಿನಗಳಲ್ಲಿ ಜಿಲ್ಲೆಗೆ ಭೇಟಿ ನೀಡಿ ನೇಮಕ ಕುರಿತು ಗೊಂದಲ ನಿವಾರಿಸುವುದಾಗಿ’ ಭರವಸೆ ನೀಡಿರು. ನಂತರ ಕಾರ್ಯಕರ್ತರು ಪ್ರತಿಭಟನೆ ಕೈಬಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.