
ಹೊಳೆನರಸೀಪುರ: ‘ಪ್ರಜಾವಾಣಿ’–‘ಡೆಕ್ಕನ್ ಹೆರಾಲ್ಡ್’ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಫೆ.18ರ ಬುಧವಾರ ಇಲ್ಲಿನ ಸ್ವರ್ಣಾ ವಿದ್ಯಾಸಂಸ್ಥೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ ಆಯೋಜಿಸಲಾಗಿದೆ.
ಇಂಡಿಯನ್ ಜೂನಿಯರ್ ಛೇಂಬರ್ನ ರಾಷ್ಟ್ರೀಯ ತರಬೇತುದಾರ, ಶೃಂಗೇರಿಯ ಎನ್.ಸಿ. ಪಾಂಡುರಂಗ ಶಿಬಿರ ನಡೆಸಿಕೊಡಲಿದ್ದಾರೆ. ತಹಶೀಲ್ದಾರ್ ವೈ.ಎಂ. ರೇಣುಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಜಿ. ಮುನಿರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್. ಸೋಮಲಿಂಗೇಗೌಡ, ‘ಪ್ರಜಾವಾಣಿ’ ಮೈಸೂರು ಬ್ಯೂರೊ ಮುಖ್ಯಸ್ಥ ಕೆ. ನರಸಿಂಹಮೂರ್ತಿ, ಡೆಕ್ಕನ್ ಹೆರಾಲ್ದ್ ಮುಖ್ಯಸ್ಥ ಟಿ.ಆರ್. ಸತೀಶ್ ಕುಮಾರ್, ಪ್ರಸರಣ ವಿಭಾಗದ ಪ್ರಧಾನ ವ್ಯವಸ್ಥಾಪಕ ಬಿ.ಎ.ರವಿ, ಪ್ರಸರಣಾ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ ಜಗನ್ನಾಥ್ ಜೋಯಿಸ್ ಭಾಗವಹಿಸಲಿದ್ದಾರೆ.
ಭಾಗವಹಿಸುವ ವಿದ್ಯಾರ್ಥಿಗಳಿಗೆ ಪೆನ್, ನೋಟ್ ಪ್ಯಾಡ್ ನೀಡಲಾಗುತ್ತದೆ. ವಿದ್ಯಾರ್ಥಿಗಳು ಯಾವುದಾದರೂ ಒಂದು ವಿಷಯದ ಪಠ್ಯ ಪುಸ್ತಕ ತರಬೇಕು. ಉಪಾಹಾರದ ವ್ಯವಸ್ಥೆ ಇರುತ್ತದೆ ಎಂದು ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶೋಭಾ ಬಾಲಕೃಷ್ಣ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.