ಹಾಸನ: ಕೋವಿಡ್ ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಕೆ ನೀಡಿರುವುದರಿಂದ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಎಚ್.ಡಿ.ರೇವಣ್ಣ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ತಾಲ್ಲೂಕು ಆಸ್ಪತ್ರೆಗಳಲ್ಲಿ ನೂರು ಹಾಸಿಗೆ ಮಕ್ಕಳು ಮತ್ತು ತಾಯಂದಿರಿಗೆ ಹಾಗೂ ಸಮುದಾಯಆಸ್ಪತ್ರೆಗಳಲ್ಲಿ 15 ಹಾಸಿಗೆ ಮಕ್ಕಳಿಗೆ ಮೀಸಲಿಡಬೇಕು. ಎರಡನೇ ಅಲೆಗೆ ಸರ್ಕಾರ ಸರಿಯಾದಸಿದ್ಧತೆ ಮಾಡಿಕೊಳ್ಳದ ಕಾರಣ ಸಾಕಷ್ಟು ಸಾವು, ನೋವು ಸಂಭವಿಸಿದೆ. ರಾಜ್ಯದಲ್ಲಿ ಮೂವತ್ತುಸಾವಿರ ಜನರು ಮೃತಪಟ್ಟಿದ್ದಾರೆ ಎಂದು ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹಾಗೂ ಮುಖ್ಯಮಂತ್ರಿ ಜೊತೆ ಮಾತನಾಡಿದ್ದೇನೆ. ಆಸ್ಪತ್ರೆಗಳನ್ನು ಮೇಲ್ದರ್ಜಗೇರಿಸಲು ಬೇಕಾದ ಅನುದಾನ ಕೋರಿಜಿಲ್ಲಾಧಿಕಾರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ₹ 15 ಕೋಟಿ ಅನುದಾನ ಬಿಡುಗಡೆಮಾಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೂ ಕೋರಲಾಗಿದೆ. ಸರ್ಕಾರಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಕೋವಿಡ್ನಿಂದ ಮೃತಪಟ್ಟ ಕುಟುಂಬಕ್ಕೆ ಸರ್ಕಾರ ಘೋಷಿಸಿರುವ ₹1 ಲಕ್ಷ ಪರಿಹಾರ ಬಿಡುಗಡೆಮಾಡಬೇಕು ಎಂದರು.
‘ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಏನು ಮಾಡಿದ್ರು’ ಎಂಬ ಶಾಸಕಪ್ರೀತಂ ಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ ರೇವಣ್ಣ, ಹಾಸನ-ಬೆಂಗಳೂರು ನಾಲ್ಕು ಪಥದ ರಸ್ತೆ,ಮೆಡಿಕಲ್ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಪಶು ವೈದ್ಯಕೀಯ ಕಾಲೇಜು,ಹೊಸ ಬಸ್ ನಿಲ್ದಾಣ ರೈಲ್ವೆ ಮೇಲ್ಸೇತುವೆ ಮಾಡಿದ್ದಾರೆ. ಬೆಂಗಳೂರು-ಮಂಗಳೂರು ರೈಲುಸಂಚಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕೊಡುಗೆ ಇದೆ ಎಂದು ಹೇಳಿದರು.
ಜಿಲ್ಲೆಗೆ ಯಡಿಯೂರಪ್ಪ ಏನು ದ್ರೋಹ ಮಾಡಿದ್ದಾರೆ ಎಂಬ ದಾಖಲೆಗಳನ್ನು ಅವರಿಗೆ ನೀಡುತ್ತೇನೆ.ದೊಡ್ಡವರ ಹೇಳಿಕೆಗೆ ಉತ್ತರ ನೀಡಲು ಹೋಗುವುದಿಲ್ಲ. 2007 ರಿಂದ ಹಾಸನ ಜಿಲ್ಲೆಗೆ ಏನೇನುಅನ್ಯಾಯವಾಗಿದೆ ಎಂಬುದನ್ನು ದಾಖಲೆ ಸಮೇತ ಮುಂದಿನ ದಿನಗಳಲ್ಲಿ ವಿವರಿಸುತ್ತೇನೆ.ಬಕ್ರೀದ್ ಹಬ್ಬ ಇರುವ ಹಿನ್ನೆಲೆಯಲ್ಲಿ ಹಬ್ಬ ಮುಗಿದ ನಂತರ ಸಿ.ಎಂ ಜೊತೆ ಮಾತನಾಡುವುದಾಗಿ ದೇವೇಗೌಡರು ಹೇಳಿದ್ದಾರೆ. ಬಳಿಕ ವಿಮಾನ ನಿಲ್ದಾಣ ಹೋರಾಟ ಸಂಬಂಧ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ನಡೆಯಲಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆಪ್ರತಿಕ್ರಿಯಿಸಿದ ರೇವಣ್ಣ, ‘ನನಗೆ ಭವಿಷ್ಯ ಹೇಳಲು ಬರುವುದಿಲ್ಲ. ನಮ್ಮ ಬಳಿ ಕೊರವಂಜಿಗಳಿಲ್ಲ.ಮೂವರು ಕೊರವಂಜಿ ಸಿ.ಎಂ ಆಗುತ್ತೀರಾ ಎಂದು ಅವರಿಗೆ ಹೇಳಿದ್ದಾರೆ. ದೊಡ್ಡವರ ಕಥೆ ನನಗೆಬೇಕಿಲ್ಲ. ನಾನು ಹೊಳೆನರಸೀಪುರ ಕ್ಷೇತ್ರದ ಶಾಸಕ ಅಷ್ಟೇ’ ಎಂದು ಉತ್ತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.