ADVERTISEMENT

ರೇವಣ್ಣ ಹೊಗಳಲು ಜಯಮಾಲಾ ಯಾರು?: ಕಾಂಗ್ರೆಸ್‌ ಮುಖಂಡ ಎ.ಮಂಜು ತೀವ್ರ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2018, 13:15 IST
Last Updated 5 ನವೆಂಬರ್ 2018, 13:15 IST
ಮಂಜು
ಮಂಜು   

ಹಾಸನ: ರಾಜಕೀಯ ಎದುರಾಳಿ ಎಚ್.ಡಿ.ರೇವಣ್ಣ ಅವರನ್ನು ಹಾಡಿ ಹೊಗಳಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ಅವರ ವಿರುದ್ಧ ಕಾಂಗ್ರೆಸ್‌ ಮುಖಂಡ ಎ.ಮಂಜು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹಾಸನಾಂಬೆ ದರ್ಶನ ಪಡೆದ ನಂತರ ಮಾತನಾಡಿದ ಅವರು, ‘ಜಯಮಾಲಾ ಸಚಿವರಾಗಿ ಹೀಗೆ ಹೇಳಿಕೆ ನೀಡಿರುವುದು ತಪ್ಪು. ಕೂಡಲೇ ಅವರು ಇದು ನನ್ನ ವೈಯಕ್ತಿಕ ಹೇಳಿಕೆ ಎಂದು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಬೇಕು. ರಾಜಕೀಯವನ್ನು ಚಿತ್ರರಂಗ ಅಂದುಕೊಂಡಿದ್ದಾರೆ. ಬಹುಶಃ ಅವರು ಅನುಭವದ ಕೊರತೆಯಿಂದ ಹೀಗೆ ಹೇಳಿದ್ದಾರೆ. ಯಾವ ವೇದಿಕೆಯಲ್ಲಿ ಏನು ಮಾತನಾಡಬೇಕು ಎಂಬುದು ಅವರಿಗೆ ಗೊತ್ತಿಲ್ಲ’ ಎಂದು ತರಾಟೆಗೆ ತೆಗೆದುಕೊಂಡರು.

‘ರೇವಣ್ಣ ಅವರನ್ನು ಹೊಗಳಲು ಜಯಮಾಲಾ ಯಾರು?’ ಎಂದು ಖಾರವಾಗಿ ಪ್ರಶ್ನಿಸಿದ ಮಂಜು, ಇದರ ವಿರುದ್ಧ ಹೈಕಮಾಂಡ್ ಗೂ ದೂರು ನೀಡುವೆ. ಜೊತೆಗೆ ಪಕ್ಷದ ವೇದಿಕೆಯಲ್ಲೂ ಚರ್ಚೆ ಮಾಡುವೆ’ ಎಂದರು.

ADVERTISEMENT

‘ಜಯಮಾಲಾ ಚುನಾವಣೆ ಎದುರಿಸಿ ಗೆದ್ದು ಸಚಿವರಾದವರಲ್ಲ. ಮುಂದೆ ಚುನಾವಣೆಯಲ್ಲಿ ಗೆದ್ದು ಬಂದು ನಂತರ ಮಾತನಾಡಲಿ. ಅವರು ಆಕಸ್ಮಿಕವಾಗಿ ಸಚಿವೆಯಾಗಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.